ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ತಿ.ನರಸೀಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಚಿರತೆ ಸೆರೆ ಕಾರ್ಯಾ ಚರಣೆಗೆ ಅತ್ಯಾಧುನಿಕ ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಲಾಗುತ್ತಿದೆ.
ತಿಂಗಳ ಅಂತರದಲ್ಲಿ ತಾಲ್ಲೂಕಿನಲ್ಲಿ ಇಬ್ಬರನ್ನು ಚಿರತೆ ಬಲಿ ತೆಗೆದುಕೊಂಡ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಚಿರತೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಚಿರತೆಯ ಚಲನವಲನ ಕಂಡು ಹಿಡಿಯು ವುದಕ್ಕಾಗಿ ಅರಣ್ಯ ಇಲಾಖೆಯು ಡ್ರೋನ್ ಕ್ಯಾಮೆರಾ ಮೊರೆ ಹೋಗಿದೆ.
ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಒಡ್ಗಲ್ ರಂಗನಾಥಸ್ವಾಮಿ ಬೆಟ್ಟ, ಉಕ್ಕಲಗೆರೆ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ ಹಾಗೂ ವಿವಿಧ ಗ್ರಾಮಗಳಲ್ಲಿ 10 ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಈ ಡ್ರೋನ್ ಕ್ಯಾಮೆರಾಗಳು ಅತ್ಯಾಧುನಿಕ ತಂತ್ರಜ್ಞಾನ ಹೊಂದಿವೆ. ಸಮಾರಂಭಗಳಲ್ಲಿ ಬಳಸುವ ಡ್ರೋನ್ಗಿಂತ ಸುಧಾರಿತ ತಂತ್ರಜ್ಞಾನ ಒಳಗೊಂಡಿದೆ. ರಾತ್ರಿಯ ವೇಳೆಯೂ ಚಿತ್ರಣವನ್ನು ಸೆರೆ ಹಿಡಿಯುವ ಸಾಮರ್ಥ್ಯ ಹೊಂದಿದೆ. ಹೆಚ್ಚಿನ ರೆಸಲ್ಯೂಷನ್ ಹೊಂದಿರುವ ಕ್ಯಾಮೆರಾವಾಗಿದೆ.
ಈ ಕುರಿತು ಡಿಸಿಎಫ್ ಕಮಲಾ ಕರಿಕಾಳನ್ ಮಾತನಾಡಿ, ಉಕ್ಕಲಗೆರೆ ಬೆಟ್ಟದಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ಗಮನಿಸಿದಾಗ ಆ ಪ್ರದೇಶದಲ್ಲಿ ಚಿರತೆ ಸಂಚರಿಸಿರುವುದು ಕಂಡು ಬಂದಿದೆ. ನಮ್ಮ ತಂಡವು ಚಿರತೆಯ ಚಲನವಲನಗಳನ್ನು ಗಮನಿಸುತ್ತಿದೆ. ಬೆಟ್ಟದ ಮೇಲೇರಿ ಡ್ರೋನ್ ಬಳಸಲು ಯೋಜಿಸಲಾಗಿದೆ. ಆದಷ್ಟು ಬೇಗ ಸೆರೆ ಹಿಡಿಯುವ ವಿಶ್ವಾಸವಿದೆ ಎಂದು ತಿಳಿಸಿದರು.