ಮನೆ ರಾಜ್ಯ ಕೊಪ್ಪಳ: ಕ್ಯಾಮರಾ ಕಂಡು ದಿಕ್ಕಾಪಾಲಾಗಿ ಓಡಿದ ಆರ್‌’ಟಿಒ ಅಧಿಕಾರಿಗಳು

ಕೊಪ್ಪಳ: ಕ್ಯಾಮರಾ ಕಂಡು ದಿಕ್ಕಾಪಾಲಾಗಿ ಓಡಿದ ಆರ್‌’ಟಿಒ ಅಧಿಕಾರಿಗಳು

0

ಕೊಪ್ಪಳ(Koppala): ತಾಲ್ಲೂಕಿನ ಕೆರೆಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳ ಚಾಲಕರಿಂದ ಅಕ್ರಮವಾಗಿ ಹಣ ವಸೂಲು ಮಾಡುತ್ತಿದ್ದ ಆರ್‌’ಟಿಒ ಅಧಿಕಾರಿಗಳು ಮಾಧ್ಯಮಗಳ ಕ್ಯಾಮರಾ ಕಂಡು ದಿಕ್ಕಾಪಾಲಾಗಿ ಓಡಿ ಹೋಗಿರುವ ಘಟನೆ ನಡೆದಿದೆ.

ಗಂಗಾವತಿ ತಾಲ್ಲೂಕಿನ ಅಂಜನಾದ್ರಿಗೆ ಶುಕ್ರವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭೇಟಿ ನೀಡಿದ್ದರು. ಈ ಕಾರ್ಯಕ್ರಮದ ವರದಿಗೆ ತೆರಳಿ ವಾಪಸ್‌ ಬರುವಾಗ ವಾರ್ತಾ ಇಲಾಖೆಯ ವಾಹನವನ್ನು ಆರ್’ಟಿಓ ಅಧಿಕಾರಿಗಳು ತಡೆದು ನಿಲ್ಲಿಸಿದರು.

ಯಾಕೆಂದು ಪ್ರಶ್ನಿಸಿದಾಗ ಏನೂ ಉತ್ತರಿಸಲಿಲ್ಲ.ಇದೇ ವೇಳೆ ಆರ್‌’ಟಿಒ ಕಚೇರಿಯ ಬ್ರೇಕ್‌ ಇನ್‌’ಸ್ಟೆಕ್ಟರ್‌ ಜವರೇಗೌಡ ಅವರಿಗೆ ಲಾರಿ ಚಾಲಕನೊಬ್ಬ ₹50 ಕೊಡಲು ಬಂದಾಗ ಮಾಧ್ಯಮ ಪ್ರತಿನಿಧಿಗಳು ಕ್ಯಾಮೆರಾದಲ್ಲಿ ಅದನ್ನು ದಾಖಲಿಸಲು ಮುಂದಾದರು.

ಇದನ್ನು ಕಂಡ ಆರ್‌’ಟಿಒ ಸಿಬ್ಬಂದಿ ಗಲಿಬಿಲಿಗೊಂಡು ರಸ್ತೆಯ ಪಕ್ಕದಲ್ಲಿದ್ದ ಹೊಲದಲ್ಲಿ ಓಡಿ ಹೋದರು. ಅವರನ್ನು ಮಾಧ್ಯಮದವರು ಬೆನ್ನಟ್ಟಿದಾಗ ಹಣ ತುಂಬಿದ ಚೀಲವನ್ನು ಸಿಬ್ಬಂದಿ ತೆಗೆದುಕೊಂಡು ಹೋಗುತ್ತಿದ್ದ ಚಿತ್ರಣ ಕಂಡುಬಂತು.

ಯಾಕೆ ಓಡುವಿರಿ ನೀವು ಅಧಿಕಾರಿಗಳು ಹೌದೊ ಅಲ್ಲವೊ  ? ಎಂದು ಪ್ರಶ್ನಿಸಿದಾಗ ಉತ್ತರ ಕೊಡದೆ ಸಿಬ್ಬಂದಿ ಓಡಿ ಹೋದರು.