ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಡ್ಯ(Mandya): ಕರ್ನಾಟಕ ಜಾನಪದ ಕಾವ್ಯ, ಕಲೆ, ಸಾಹಿತ್ಯದ ತವರೂರು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದಿನಿಂದ ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಕರ್ನಾಟಕ ಜಾನಪದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜಾನಪದ ಕಲೆ ಅಮರವಾಗಿ ಉಳಿಯಲು ರಾಜ್ಯದ ಜಾನಪದ ಕಲಾ ಸಂಸ್ಕೃತಿಗೆ ಇರುವ ಇತಿಹಾಸದ ಕಾರಣದಿಂದ ಹಾಗಾಗಿ ನಾವೆಲ್ಲರೂ ಅದನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ. ಎರಡು ದಿನಗಳ ಈ ಕಾರ್ಯಕ್ರಮದ ಮೂಲಕ ಅದು ಮತ್ತಷ್ಟು ಸಾಕಾರಗೊಳ್ಳಬೇಕು.ಇದಕ್ಕಾಗಿ ಬೇಕಾದ ಎಲ್ಲ ಅಗತ್ಯ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ ಎಂದರು.
ಮಹಿಳಾ ಡೊಳ್ಳು, ವೀರಗಾಸೆ, ತಮಟೆ,ನಾದಸ್ವರ ಸೇರಿದಂತೆ ನೂರಾರು ಕಲಾ ಪ್ರಕಾರಗಳ 400 ಕ್ಕೂ ಅಧಿಕ ಜಾನಪದ ಕಲಾವಿದರು ಸಮ್ಮೇಳನಕ್ಕೆ ಮೆರಗು ತಂದರು. ಇಂದು ಮತ್ತು ನಾಳೆ ವಿವಿಧ ಗೋಷ್ಟಿಗಳು, ನೃತ್ಯ, ಹಾಡುಗಾರಿಕೆ ಮೊದಲಾದ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
ಆದಿ ಚುಂಚನಗಿರಿ ಮಠದ ಶ್ರೀ ಶ್ರೀ ಶ್ರೀಮಂತರ ಡಾ.ನಿರ್ಮಲಾ ನಂದನಾಥ ಮಹಾಸ್ವಾಮೀಜಿ,ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದ ನಾಥ ಸ್ವಾಮೀಜಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ.ಹಿ.ಶಿ.ರಾಮಚಂದ್ರೇಗೌಡ, ಶಾಸಕ ಎಂ.ಶ್ರೀನಿವಾಸ್, ಪ್ರೊ.ಎಂ.ಕೃಷ್ಣೆಗೌಡ, ಸಮ್ಮೇಳನಾಧ್ಯಕ್ಷ ಡಾ.ರಾಮೇಗೌಡ, ಜಿಲ್ಲಾಧಿಕಾರಿ ಗೋಪಾಲಕೃಷ್ಣ ಇತರರು ಉಪಸ್ಥಿತರಿದ್ದರು.