ಮನೆ ರಾಷ್ಟ್ರೀಯ ‘ಮೋದಿ ಹತ್ಯೆ ಮಾಡಿ’ ಎಂದಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ

‘ಮೋದಿ ಹತ್ಯೆ ಮಾಡಿ’ ಎಂದಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ

0

ಮಧ್ಯಪ್ರದೇಶ(Madya Pradesh): ಸಂವಿಧಾನ ಉಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಇಂದು ಬಂಧಿಸಲಾಗಿದೆ. ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.

ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ. ಮೋದಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಜಿಲ್ಲೆಯ ಪವಾಯಿ ಪೊಲೀಸ್‌ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸೋಮವಾರ ಮಧ್ಯಾಹ್ನ ಎಫ್‌’ಐಆರ್‌ ದಾಖಲಾಗಿತ್ತು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿಕೆಯನ್ನು ಖಂಡಿಸಿದ್ದಾರೆ. “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ಟೀಕೆ ಮಾಡಿದ್ದಾರೆ.ಮೋದಿ ಕೊಲ್ಲಿ ಎಂದಿಲ್ಲ: ರಾಜ ಸ್ಪಷ್ಟನೆತಮ್ಮ ಹೇಳಿಕೆ ವಿವಾದ ಸೃಷ್ಟಿಸಿದ ಬಳಿಕ ಸ್ಪಷ್ಟನೆ ನೀಡಿರುವ ರಾಜ ಪಟೇರಿಯಾ, ನಾನು ಇಲ್ಲಿ ಹತ್ಯೆ ಪದವನ್ನು ಮೋದಿಯವರನ್ನು ಸೋಲಿಸಬೇಕೆಂಬ ಅರ್ಥದಲ್ಲಿ ಹೇಳಿದ್ದೇನೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಮಹಾತ್ಮ ಗಾಂಧಿಯ ಅನುಯಾಯಿ. ನಾನು ಯಾರನ್ನೂ ಕೊಲ್ಲುವ ಬಗ್ಗೆ ಮಾತನಾಡುವುದಿಲ್ಲ. ಸಂವಿಧಾನ, ದಲಿತರು, ಅಲ್ಪಸಂಖ್ಯಾತರನ್ನು ರಕ್ಷಿಸಲು ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸಲು ಪ್ರಧಾನಿ ಮೋದಿಯವರನ್ನು ಚುನಾವಣೆಯಲ್ಲಿ ಸೋಲಿಸಬೇಕಿದೆ ಎಂದಷ್ಟೇ ಹೇಳಿರುವೆ ಎಂದು ಹೇಳಿದ್ದಾರೆ.