ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆರವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು “ಜೀ ಹುಜೂರ್” ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದೆ.
2013ರಿಂದ 2018ರವರೆಗೆ ಏನಾಗಿತ್ತು ನೆನಪಿಸಿಕೊಳ್ಳಿ. ಕೆ.ಸಿ.ವೇಣುಗೋಪಾಲ್ ಎಂಬ ಸೋನಿಯಾ ಗಾಂಧಿಯವರ ಅಂಚೆಯಣ್ಣನ ಪಾದಾರವಿಂದಗಳಿಗೆ ರಾಜ್ಯದ ಅಂದಿನ ಕಾಂಗ್ರೆಸ್ ಸರ್ಕಾರವನ್ನು ಅರ್ಪಿಸಲಾಗಿತ್ತು. ಸಿದ್ದರಾಮಯ್ಯನವರು ಕನ್ನಡ ಅಸ್ಮಿತೆಯನ್ನು ಅವರ ಮುಂದೆ ನೈವೇದ್ಯಕ್ಕಿಟ್ಟಿದ್ದರು. ಈಗ ಅಧಿಕಾರವಿಲ್ಲದಿದ್ದರೂ ಅದೇ ಸಂಸ್ಕೃತಿ ಮರುಕಳಿಸಿದೆ’ ಅಂತಾ ಬಿಜೆಪಿ ಟೀಕಿಸಿದೆ.
‘ಈಗ ಅಧಿಕಾರವಿಲ್ಲದೇ ರಾಜಸ್ಥಾನದ ಹೊರತಾಗಿ ನೀರಿನಿಂದ ಹೊರತೆಗೆದ ಮೀನಿನಂತಾಗಿರುವ ಕಾಂಗ್ರೆಸ್ ಸಂಪತ್ಭರಿತವಾಗಿರುವ ನಮ್ಮ ರಾಜ್ಯವನ್ನು ತಮ್ಮ ನಾಯಕರ ತಿಜೋರಿಗಳನ್ನು ತುಂಬಿಸಿಕೊಳ್ಳಲು ಎಟಿಎಂನಂತೆ ಬಳಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ. ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿಯೂ ಮಾಡಿದ್ದರು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಡಬಲ್ ಎಂಜಿನ್ ವೇಗದ ಅಭಿವೃದ್ಧಿಯನ್ನು ರಾಜ್ಯಕ್ಕೆ ನೀಡಲು ತಲೆ ಕೆಳಗಾಗಿ ನಿಂತರೂ ಸಾಧ್ಯವಾಗದ ಕಾಂಗ್ರೆಸ್ ಯಾವ ಮಟ್ಟಕ್ಕಾದರೂ ಇಳಿದು ಅಧಿಕಾರಕ್ಕೆ ಬಂದು ರಾಜ್ಯವನ್ನು #ATM ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಹವಣಿಸುತ್ತಿದೆ. ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ’ವೆಂದು ಬಿಜೆಪಿ ಹೇಳಿದೆ.