ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ, ದಾನಿಗಳಿಂದಷ್ಟೆ ರಕ್ತವನ್ನು ಪಡೆಯಬಹುದು. ಈ ನಿಟ್ಟಿನಲ್ಲಿ ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹೆಚ್ಚಾಗಬೇಕು ಎಂದು ಮೈಸೂರು ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ವೈ ಎಂ ಶಿವಕುಮಾರ್ ತಿಳಿಸಿದರು.
ಮೈಸೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ರಕ್ತದಾನಿಗಳ ಅನುಕೂಲಕ್ಕಾಗಿ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಮಾಡುವ ಉದ್ದೇಶದಿಂದ , ರಕ್ತದಾನಿಗಳನ್ನು ಉತ್ತೇಜಿಸಲು, ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಮಾಡುವ ರಕ್ತದಾನಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯ ವಾಹನ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ರಕ್ತವನ್ನು ವಿವಿಧ ಭಾಗಗಳಾಗಿ ಬೇರ್ಪಡಿಸಿ ನಿರ್ದಿಷ್ಟ ಬೇಡಿಕೆಗೆ ಅನುಗುಣವಾಗಿ ಬಳಕೆ ಮಾಡಿಕೊಳ್ಳುವ ತಂತ್ರಜ್ಞಾನ ಚಾಲ್ತಿಯಲ್ಲಿದೆ. ಆದರೆ, ರಕ್ತವನ್ನು ದೀರ್ಘ ಕಾಲದವರೆಗೂ ಸಂರಕ್ಷಿಸಿಡಲು ಸಾಧ್ಯವಿಲ್ಲ. ಹೆಚ್ಚೆಂದರೆ ರಕ್ತವನ್ನು 32 ದಿನ, ಪೇಟ್ಲೆಟ್’ಗಳನ್ನು ವಾರದವರೆಗೂ ಇಡಬಹುದು. ಈ ನಿಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಸಲಹೆ ನೀಡಿದರು.
‘ವಂಶವಾಹಿನಿಗಳ ಮೂಲಕ ಬರುವ ಕಾಯಿಲೆಗಳನ್ನು ತಡೆಯುವುದು ಕಷ್ವವಾಗಿದ್ದು, ವೈದ್ಯರು ಇಂತಹ ಸವಾಲುಗಳನ್ನು ಸ್ವೀಕರಿಸಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಮಂಡನೆ ಹಾಗೂ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.
ತುರ್ತು ಅವಘಡಗಳು ಸಂಭವಿಸಿದಾಗ ರಕ್ತದ ಅವಶ್ಯಕತೆ ಹೆಚ್ಚಾಗಿರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದಿದ್ದರೆ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚು. ಹಾಗಾಗಿ, ರಕ್ತದಾನದ ಬಗ್ಗೆ ಯುವಕರಲ್ಲಿ ಅರಿವು ಮೂಡಬೇಕು. ಕಾಲೇಜುಗಳಲ್ಲಿ ರಕ್ತದಾನಿಗಳ ಗುಂಪು ರಚನೆ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಂತರ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ನಗರ ಹಾಗೂ ಜಿಲ್ಲೆಯಲ್ಲಿ ರಕ್ತದಾನ ಪ್ರಮಾಣವನ್ನು ಹೆಚ್ಚಿಸಲು ಸ್ವಯಂ ಪ್ರೇರಿತ ರಕ್ತದಾನಿಗಳಿಗೆ ನಮ್ಮ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನಿಗಳಿಗೆ ಅವರ ಇರುವ ಸ್ಥಳದಿಂದ ಕರೆದುಕೊಂಡು ಬಂದು ಸ್ವಯಂ ಪ್ರೇರಿತ ರಕ್ತದಾನ ಪಡೆದು ಆನಂತರ ಕರೆದುಕೊಂಡು ಬಂದ ಸ್ಥಳದಲ್ಲಿ ಬಿಡುವಂತ ವ್ಯವಸ್ಥೆಯನ್ನು ಮಾಡಲಾಗಿದೆ. ಇದರ ಉಪಯೋಗವನ್ನು ರಕ್ತದಾನಿಗಳು ಪಡೆಯಬಹುದು ಎಂದು ಹೇಳಿದರು.
ರಕ್ತದಾನಿಗಳಿಗೆ ಇನ್ನೂ ಅನುಕೂಲವಾಗುವ ನಿಟ್ಟಿನಲ್ಲಿ ಅವರು ಇರುವ ಸ್ಥಳದಲ್ಲಿ ರಕ್ತದಾನ ಮಾಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಂಚಾರಿ ರಕ್ತ ನಿಧಿ ವಾಹನವನ್ನು ಲೋಕಾರ್ಪಣೆ ಮಾಡುವ ಚಿಂತನೆಯಲ್ಲಿದ್ದೇವೆ. ಸ್ವಯಂ ಪ್ರೇರಿತರಕ್ತದಾನ ಮಾಡಲು ವಾಹನದ ವ್ಯವಸ್ಥೆ ಬೇಕಾದಲ್ಲಿ 9008123101 ಈ ದೂರವಾಣಿಗೆ ಸಂಪರ್ಕಿಸಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸ್ತ್ರೀ ಮತ್ತು ಪ್ರಸೂತಿ ಸಂಘದ ಅಧ್ಯಕ್ಷೆ ಹಾಗೂ ವೈದ್ಯರಾದ ರೂಪಪ್ರಕಾಶ್, ಮುತ್ತಣ್ಣ, ರಶ್ಮಿ, ಮಮತಾ, ಸದಾಶಿವ್ , ಚಂದ್ರು, ಶಾರದಾ, ಪ್ರಭು, ಬ್ಲಡ್ ಆನ್ ಕಾಲ್ ಕ್ಲಬ್ ದೇವೇಂದ್ರ ಪರಿಹಾರಿಯ, ಆನಂದ್ ಮಂಡೂತ್, ಅನ್ಮೋಲ್ ಹಾಜರಿದ್ದರು.