ಮನೆ ಸುದ್ದಿ ಜಾಲ ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ ಸ್ಟೇಬಲ್ ಸಾವು

ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ ಸ್ಟೇಬಲ್ ಸಾವು

0

ಮಂಗಳೂರು(Mangalore): ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ತಮ್ಮ ಊರಾದ ಬಾಗಲಕೋಟೆಯಲ್ಲಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಶೇಷ ಕರ್ತವ್ಯದಡಿ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದರು.

ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.