ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಭ್ರಷ್ಟಾಚಾರ ತಡೆ ಕಾಯಿದೆಯಡಿ ನೇರ ಸಾಕ್ಷ್ಯಾಧಾರಗಳು ಇಲ್ಲದಿದ್ದಾಗ ಸಾಂದರ್ಭಿಕ ಸಾಕ್ಷ್ಯಗಳನ್ನು ಆಧರಿಸಿ ಸಾರ್ವಜನಿಕ ಸೇವಕನನ್ನು ದೋಷಿ ಎಂದು ಪರಿಗಣಿಸಬಹುದು ಎಂಬುದಾಗಿ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.
[ನೀರಜ್ ದತ್ತಾ ಮತ್ತು ದೆಹಲಿ ಸರ್ಕಾರ ನಡುವಣ ಪ್ರಕರಣ].
ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕೆ ಮತ್ತು ಪಡೆದಿದ್ದಕ್ಕೆ ನೇರ ಮೌಖಿಕ ಅಥವಾ ದಾಖಲೆಯಲ್ಲಿ ಸಾಕ್ಷ್ಯಗಳು ಇಲ್ಲದಿದ್ದಲ್ಲಿ ಸಾಂದರ್ಭಿಕ ಸಾಕ್ಷ್ಯಗಳ ಮೂಲಕ ಅದನ್ನು ಸಾಬೀತುಪಡಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್, ವಿ ರಾಮಸುಬ್ರಮಣ್ಯಂ, ಬಿ ಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ತಿಳಿಸಿದೆ.
“ದೂರುದಾರರ ಪುರಾವೆಗಳು ಇಲ್ಲದಿದ್ದಾಗ ಅಪರಾಧವನ್ನು ತಾರ್ಕಿಕವಾಗಿ ಮಂಡಿಸಲು ಅನುಮತಿ ಇದೆ” ಎಂದು ನ್ಯಾಯಾಲಯ ಹೇಳಿದೆ.
ಆದರೆ, ಮೂಲಭೂತ ಸಂಗತಿಗಳನ್ನು ಸಾಬೀತುಪಡಿಸಿದಾಗ ಮಾತ್ರವಷ್ಟೇ ಅಕ್ರಮವಾಗಿ ಲಂಚಕ್ಕೆ ಬೇಡಿಕೆ ಇಟ್ಟ ಅಥವಾ ಸ್ವೀಕರಿಸಿದ್ದಕ್ಕೆ ಸಂಬಂಧಿಸಿದ ಊಹೆಯನ್ನು ತಾರ್ಕಿಕವಾಗಿ ನ್ಯಾಯಾಲಯ ತೀರ್ಮಾನ ಮಾಡಬಹುದಾಗಿದೆ ಎಂದು ಅದು ಸ್ಪಷ್ಟಪಡಿಸಿದೆ.
ಲಂಚದ ಬೇಡಿಕೆ ಮತ್ತು ಅದನ್ನು ಸ್ವೀಕರಿಸಿದ್ದನ್ನು ಸಾಬೀತುಪಡಿಸುವ ವಿವಿಧ ಅಂಶಗಳನ್ನು ವಿವರಿಸಿದ ನ್ಯಾಯಾಲಯ ಸೆಕ್ಷನ್ 7 ಮತ್ತು 13(1)(1) ಅಡಿಯಲ್ಲಿ ಅಪರಾಧಗಳಿಗೆ ಶಿಕ್ಷೆ ನೀಡಲು ಅಗತ್ಯವಾದ ಪುರಾವೆಗಳ ಸ್ವರೂಪ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದಂತೆ ಈ ಹಿಂದೆ ತ್ರಿಸದಸ್ಯ ಪೀಠ ನೀಡಿದ್ದ ತೀರ್ಪಿನ ಬಗ್ಗೆ ಯಾವುದೇ ಸಂಘರ್ಷಗಳಿಲ್ಲ ಎಂದು ಸ್ಪಷ್ಟಪಡಿಸಿತು.