ಮನೆ ಸುದ್ದಿ ಜಾಲ ಟಿ.ಸತೀಶ್ ಜವರೇಗೌಡಗೆ ‘‌ವಿಶ್ವಮಾನವ ಸಾಹಿತ್ಯ ಚೇತನ ಪ್ರಶಸ್ತಿ’

ಟಿ.ಸತೀಶ್ ಜವರೇಗೌಡಗೆ ‘‌ವಿಶ್ವಮಾನವ ಸಾಹಿತ್ಯ ಚೇತನ ಪ್ರಶಸ್ತಿ’

0

ಮೈಸೂರು(Mysuru): ಸಾಹಿತಿ ಟಿ.ಸತೀಶ್ ಜವರೇಗೌಡ ಬೆಂಗಳೂರಿನ ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕೊಡಮಾಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ‘‌ವಿಶ್ವಮಾನವ ಸಾಹಿತ್ಯ ಚೇತನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕ್ರಿಯಾಶೀಲವಾಗಿರುವ ಸತೀಶ್ 6 ಕವನ ಸಂಕಲನಗಳನ್ನು ರಚಿಸಿದ್ದಾರೆ. 4 ಪುಸ್ತಕಗಳನ್ನು ಸಂಪಾದಿಸಿದ್ದಾರೆ. ಪತ್ರಿಕೆಗಳು, ಸ್ಮರಣ ಸಂಚಿಕೆಗಳು ಮತ್ತು ಅಭಿನಂದನಾ ಗ್ರಥಗಳಿಗೆ ವೈವಿಧ್ಯಮಯ ಲೇಖನಗಳನ್ನು ಬರೆದಿದ್ದಾರೆ.

ದಸರಾ ಕವಿಗೋಷ್ಠಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ನೂರಾರು ಕವಿಗೋಷ್ಠಿಗಳಲ್ಲಿ ಕವನ ವಾಚಿಸಿದ್ದಾರೆ. ಎರಡು ದಶಕಗಳ ಈ ಕಾರ್ಯವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಿ.18ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಗಾಂಧಿ ಭವನದ ಕಸ್ತೂರಿ ಬಾ ಸಭಾಂಗಣದಲ್ಲಿ ನಡೆಯುವ ‘ಸಾಹಿತ್ಯ-ಸಂಸ್ಕೃತಿ ಸಮಾಗಮ’ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಬಿ.ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.