ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚತ್ತೋಗ್ರಾಮ್: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ್ ಪೂಜಾರ ಹಾಗೂ ಯುವ ಬ್ಯಾಟರ್ ಶುಭಮನ್ ಗಿಲ್ ಅವರ ಅಬ್ಬರದ ಶತಕದ ಬಲದಿಂದ ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದೆ.
ಮೂರನೇ ದಿನವಾದ ಶುಕ್ರವಾರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 61.4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.
ಭಾರತ ಮೊದಲ ಇನ್ನಿಂಗ್ಸ್’ನಲ್ಲಿ 404 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಬಾಂಗ್ಲಾ ಗುರುವಾರ ಎರಡನೇ ದಿನದ ಅಂತ್ಯಕ್ಕೆ 44 ಓವರ್’ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತ್ತು.
ಮೂರನೇ ದಿನದಾಟ ಆರಂಭಿಸಿದ ಮೆಹದಿ ಹಸನ್ ಮಿರಾಜ್ 25, ಇಬಾದತ್ ಹೊಸೈನ್ 17 ರನ್ ಗಳಿಸಿದರು. ಇದರೊಂದಿಗೆ ಬಾಂಗ್ಲಾ ಮೊದಲ ಇನ್ನಿಂಗ್ಸ್’ನಲ್ಲಿ 55.5 ಓವರ್’ಗಳಲ್ಲಿ 150 ರನ್ ಗಳಿಸಿ ಆಲೌಟ್ ಆಯಿತು.
254 ರನ್’ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತದ ಪರ ಕೆ.ಎಲ್.ರಾಹುಲ್ 23, ಶುಭಮನ್ ಗಿಲ್ 110, ಪೂಜಾರ ಔಟಾಗದೆ 102, ವಿರಾಟ್ ಕೊಹ್ಲಿ ಔಟಾಗದೆ 19 ರನ್ ಗಳಿಸಿದರು.
ಟೀಮ್ ಇಂಡಿಯಾ, ಬಾಂಗ್ಲಾ ಗೆಲುವಿಗೆ 513 ರನ್ ಗುರಿ ನೀಡಿದೆ. ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾ 8 ಓವರ್’ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದೆ.