ಮನೆ ರಾಷ್ಟ್ರೀಯ ಹೈದರಾಬಾದ್: ಮನೆಗೆ ಆಕಸ್ಮಿಕ ಬೆಂಕಿ- ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್: ಮನೆಗೆ ಆಕಸ್ಮಿಕ ಬೆಂಕಿ- ಒಂದೇ ಕುಟುಂಬದ 6 ಮಂದಿ ಸಜೀವ ದಹನ

0

ಹೈದರಾಬಾದ್‌(Hydarabad): ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಜೀವ ದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಂಚರ್ಯಾಲ ಜಿಲ್ಲೆಯ ಮಂದಮರ್ರಿ ತಾಲೂಕಿನ ವೆಂಕಟಾಪುರದಲ್ಲಿ ಶುಕ್ರವಾರ ತಡ ರಾತ್ರಿ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ(45) ಇವರ ಇಬ್ಬರು ಮಕ್ಕಳು ಹಾಗೂ ಪದ್ಮಾ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬುವರು ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಆದರೆ ಈ ವೇಳೆಗೆ 6 ಜನರು ಮೃತಪಟ್ಟಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಭೀಕರ ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ, ಈ ಕುರಿತಂತೆ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.