ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮುಂಬೈ ಮತ್ತು ದೆಹಲಿಯಲ್ಲಿ ಮೂಲಸೌಕರ್ಯ ಯೋಜನೆಗಳನ್ನು ಗುರಿಯಾಗಿಸಿಕೊಂಡು ಬ್ಲ್ಯಾಕ್’ಮೇಲ್ ತಂತ್ರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ನಿರ್ದಿಷ್ಟ ಆಸ್ತಿಯನ್ನು ಪಿಐಎಲ್’ನಲ್ಲಿ ಗುರಿಯಾಗಿಸಿಕೊಂಡಾಗ ಬಹುತೇಕ ಸಂದರ್ಭದಲ್ಲಿ ಯಾವ ಕಾರಣಕ್ಕಾಗಿ ಪಕ್ಷಕಾರರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂಬುದು ಹೈಕೋರ್ಟ್’ಗೆ ಗೊತ್ತಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾ. ಪಿ ಎಸ್ ನರಸಿಂಹ ಅವರ ನೇತೃತ್ವದ ವಿಭಾಗೀಯ ಪೀಠವು ಹೇಳಿತು.
“ಮೂಲಸೌಕರ್ಯ ಯೋಜನೆ ವಿಚಾರಗಳಲ್ಲಿ ಪಿಐಎಲ್ಗಳು ಬ್ಲ್ಯಾಕ್’ಮೇಲ್ ತಂತ್ರದ ಭಾಗವಾಗುವ ಸಾಧ್ಯತೆ ಇರುತ್ತದೆ. ಕೆಲ ಯೋಜನೆಗಳನ್ನು ಗುರಿಯಾಗಿಸಿಕೊಳ್ಳುವುದು’ ಇದರ ಉದ್ದೇಶವಾಗಿರುತ್ತದೆ. ಇಲ್ಲಿ ಹೈಕೋರ್ಟ್’ಗೆ ಅದು ಗಮನಕ್ಕೆ ಬಂದಿದೆ. ದೆಹಲಿ, ಮುಂಬೈ ಇತ್ಯಾದಿ ನಗರಗಳಲ್ಲಿ ಇದು ನಡೆಯುತ್ತಿದೆ” ಎಂದು ಪೀಠ ಹೇಳಿತು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಅನ್ಯ ಉದ್ದೇಶದಿಂದ ಅರ್ಹತೆ ಇಲ್ಲದಿದ್ದರೂ ಪಿಐಎಲ್ ದಾಖಲಿಸಿದ್ದ ಸೊಸೈಟಿಗೆ ₹1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು.
ವಾರ್ಲಿಯಲ್ಲಿ ಭೂನಿವೇಶನವೊಂದರ ಪುನರ್ ನಿರ್ಮಾಣ ಪ್ರಶ್ನಿಸಿ ಬಾಂಬೆ ಹೈಕೋರ್ಟ್’ನಲ್ಲಿ ಸರ್ತಿ ಸೇವಾ ಸಂಘ ಅರ್ಜಿ ಸಲ್ಲಿಸಿತ್ತು.
“ಪಿಐಎಲ್ ಮೂಲಕ ನಿರ್ದಿಷ್ಟ ಆಸ್ತಿಯನ್ನು ಗುರಿಯಾಗಿಸಿಕೊಂಡಾಗ ಬಹುತೇಕ ಸಂದರ್ಭದಲ್ಲಿ ಪಕ್ಷಕಾಕರರು ಏತಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂಬುದು ಹೈಕೋರ್ಟ್ಗೆ ಗೊತ್ತಿರುತ್ತದೆ. ನಿರ್ದಿಷ್ಟ ಯೋಜನೆಯೊಂದನ್ನು ಏಕೆ ಗುರಿಯಾಗಿಸಲಾಗಿದೆ ಎಂದು ತಿಳಿದಿರುತ್ತದೆ” ಎಂದು ಪೀಠ ಹೇಳಿದೆ.
“ಇಂಥ ಹಲವು ಪ್ರಕರಣಗಳ ವಿಚಾರಣೆಯನ್ನು ಬಾಂಬೆ ಹೈಕೋರ್ಟ್’ನಲ್ಲಿ ನಾನು ನಡೆಸಿದ್ದೇನೆ. ಹೈಕೋರ್ಟ್ ವಿಧಿಸಿರುವ ದಂಡವನ್ನು ಪಾವತಿಸಬೇಕು. ಇದು ನ್ಯಾಯಾಂಗದ ಸಮಯದ ದುರ್ಬಳಕೆಯಾಗಿದೆ” ಎಂದು ಸಿಜೆಐ ಸ್ಪಷ್ಟಪಡಿಸಿದರು.