ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಗ್ರಾಮೀಣ ಪ್ರದೇಶಗಳ ಜನರ ನರ ಸಂಬಂಧಿ, ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಕೌನ್ಸಿಲಿಂಗ್, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾನಸಿಕ ಅನಾರೋಗ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ʼCOMHAD-2022ʼ 3 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಗಳನ್ನು ವಹಿಸುತ್ತಿದೆ. ನಿಮ್ಹಾನ್ಸ್ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಂಬಿಬಿಎಸ್ ವೈದ್ಯರಿಗೆ ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತಿದೆ. ಇವರು ಗ್ರಾಮೀಣ ಜನರ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕೌನ್ಸಿಲಿಂಗ್ ಮೊದಲಾದ ಕ್ರಮಗಳ ಮೂಲಕ ಪರಿಹಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಮಾನಸಿಕ ಆರೋಗ್ಯ ಸಮಸ್ಯೆಯು ಇಂದಿನ ಸಮಾಜದ ಪ್ರಮುಖ ಆರೋಗ್ಯ ಸಮಸ್ಯೆಯೂ ಆಗಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ, ʼಬ್ರೈನ್ ಹೆಲ್ತ್ ಇನೀಶಿಯೇಟಿವ್ʼ ಎಂಬ ಕಾರ್ಯಕ್ರಮವನ್ನು ಕರ್ನಾಟಕ ಮೊದಲ ಬಾರಿಗೆ ಜಾರಿ ಮಾಡಿದೆ. ಇದರ ಪ್ರೇರಣೆಯಿಂದಾಗಿಯೇ ಕೇಂದ್ರ ಸರ್ಕಾರದ ಮಟ್ಟದಲ್ಲಿ ಇದೇ ಮಾದರಿಯ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮಾನಸಿಕ ಒತ್ತಡ, ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿಯ ಬದಲಾವಣೆ, ನಿದ್ದೆಯಲ್ಲಿ ವ್ಯತ್ಯಾಸ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅದರಲ್ಲೂ, ಯುವಜನರಲ್ಲಿ ಹಾಗೂ ವೃದ್ಧರಲ್ಲಿ ಒಂದಲ್ಲ ಒಂದು ಬಗೆಯ ಮಾನಸಿಕ ಅನಾರೋಗ್ಯ ಕಂಡುಬರುತ್ತಿದೆ. ಆದ್ದರಿಂದ ಈ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು.
ನರ ಸಂಬಂಧಿ ರೋಗಗಳಿಂದಾಗಿ ಆರೋಗ್ಯ ಕ್ಷೇತ್ರದ ಮೇಲೆ ಹೊರೆ ಹೆಚ್ಚುತ್ತಿದೆ. ಇದು ಆರೋಗ್ಯ ವಲಯಕ್ಕೆ ದೊಡ್ಡ ಸವಾಲಾಗಿದೆ. ಇದು ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ. ಕರ್ನಾಟಕದಲ್ಲಿ ನರ ಸಂಬಂಧಿ ಸಮಸ್ಯೆ, ಮೂರ್ಛೆ ಹಾಗೂ ಪಾರ್ಶ್ವವಾಯು ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದೆ. ಬಾಲ್ಯದಲ್ಲೇ ಮಕ್ಕಳು ಅಂಗವಿಕಲರಾಗಲು ಇರುವ ಕಾರಣಗಳಲ್ಲಿ ನರ ಸಂಬಂಧಿ ಸಮಸ್ಯೆಗಳೇ ಶೇ.70 ಪಾಲು ಹೊಂದಿವೆ. ಈ ಬಗ್ಗೆ ಶಾಲಾ ಮಕ್ಕಳಲ್ಲಿ, ವಯಸ್ಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇಂತಹ ಸಮ್ಮೇಳನದ ಮೂಲಕ ಸಮಸ್ಯೆಗಳಿಗೆ ಹೊಸ ಉತ್ತರ ದೊರೆಯಲಿದೆ. ಇದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಸಮ್ಮೇಳನದಲ್ಲಿ ಚರ್ಚೆಯಾದ ವಿಚಾರಗಳನ್ನು ಆರೋಗ್ಯ ಇಲಾಖೆಗೆ ನೀಡಿದರೆ, ಈ ಬಗ್ಗೆ ಚರ್ಚಿಸಲಾಗುವುದು. ಇದು ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.