ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ರಾಮನಗರ(Ramanagara): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಪಂಚರತ್ನ ರಥಯಾತ್ರೆ ಸಂದರ್ಭ ಮಾತನಾಡಿದ ಅವರು, ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಇದಕ್ಕೆಲ್ಲ ತೆರೆ ಎಳೆಯಬೇಕು ಎಂದೇ ಇಂದು ಈ ಘೋಷಣೆ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ನನ್ನ ಮಗನನ್ನು ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿಸಲು ತೀರ್ಮಾನಿಸಿದ್ದೇವೆ. ನಮ್ಮ ಕುಟುಂಬಕ್ಕೆ ಆಶೀರ್ವಾದ ನೀಡಿದಂತೆ ಅವನನ್ನೂ ಬೆಂಬಲಿಸಬೇಕು ಎಂದು ಕೋರಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಈ ಸಂದರ್ಭ ಜೊತೆಗಿದ್ದರು.
ಮತ್ತೊಂದು ಕುಡಿ: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಎಚ್.ಡಿ. ದೇವೇಗೌಡರ ಕುಟುಂಬದ ಕುಡಿ ಕಣಕ್ಕೆ ಇಳಿಯುವುದು ಖಾತ್ರಿಯಾಗಿದೆ. 1994ರಲ್ಲಿ ಎಚ್.ಡಿ. ದೇವೇಗೌಡರು ಇಲ್ಲಿಂದ ಸ್ಪರ್ಧಿಸಿ ಗೆದ್ದು ನಂತರದಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ನಂತರದಲ್ಲಿ ಎಚ್.ಡಿ. ಕುಮಾರಸ್ವಾಮಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತ ಬಂದಿದ್ದರು.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕುಮಾರಸ್ವಾಮಿ ಚನ್ನಪಟ್ಟಣ ಹಾಗೂ ರಾಮನಗರ ಎರಡೂ ಕ್ಷೇತ್ರದಲ್ಲೂ ಸ್ಪರ್ಧಿಸಿ ಗೆದ್ದ ಬಳಿಕ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಆಯ್ಕೆ ಆಗಿದ್ದರು.