ಮನೆ ರಾಜ್ಯ ಮೈಸೂರು: ಯುವಕನ ಮೇಲೆ ಚಿರತೆ ದಾಳಿ

ಮೈಸೂರು: ಯುವಕನ ಮೇಲೆ ಚಿರತೆ ದಾಳಿ

0

ಮೈಸೂರು(Mysuru): ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸತೀಶ್ ಎಂಬಾತ ಭಾನುವಾರ ಸಂಜೆ ಜಮೀನಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಚಿರತೆ ಏಕಾಏಕಿ ದಾಳಿ ನಡೆಸಿದ್ದರಿಂದ ತನ್ನ ಬಳಿ ಇದ್ದ ಮೊಬೈಲ್ ಮೂಲಕ ಚಿರತೆಗೆ ಹೊಡೆದು ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿರತೆ ಸ್ಥಳದಿಂದ ಓಡಿ ಹೋಗಿದೆ. ಗಾಯಗೊಂಡ ಸತೀಶ್’ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬನ್ನೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರಂದು ಕಾಲೇಜು ವಿದ್ಯಾರ್ಥಿ ಹಾಗೂ ಡಿಸೆಂಬರ್ 1ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಚಿರತೆ ಬಲಿ ಪಡೆದಿತ್ತು.

ಘಟನೆ ಬಳಿಕ ಅರಣ್ಯ ಇಲಾಖೆ ಕಳೆದ ಹದಿನೆಂಟು ದಿನಗಳಿಂದ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದರೂ ಈವರೆಗೂ ಚಿರತೆ ಸೆರೆ ಸಿಕ್ಕಿಲ್ಲ.