ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ.
ಸದ್ಯ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿನಲ್ಲಿ ಸಿಬಿಐ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ.
ಈ ಹಿಂದೆ ಕೂಡ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರು ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.
ದಾಳಿ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ದ ಕೇಸ್’ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.
ಸಿಬಿಐ ದಾಳಿಯಿಂದ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್ ವಿಶ್ವನಾಥ್ ಬಗ್ಗೆ ಇತ್ತೀಚಿಗೆ ಹಣಕಾಸಿನ ಬಗ್ಗೆ ರಾಜರೋಷವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಎಂದು ಹೇಳಿದರು.