ಮನೆ ರಾಜಕೀಯ ಸಿಬಿಐ ದಾಳಿ: ಡಿಕೆಶಿ ಆರೋಪದಲ್ಲಿ ಹುರುಳಿಲ್ಲ ಎಂದ ಸಚಿವ ಆರ್.ಅಶೋಕ್

ಸಿಬಿಐ ದಾಳಿ: ಡಿಕೆಶಿ ಆರೋಪದಲ್ಲಿ ಹುರುಳಿಲ್ಲ ಎಂದ ಸಚಿವ ಆರ್.ಅಶೋಕ್

0

ಬೆಳಗಾವಿ(Belagavi): ಬಿಜೆಪಿ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ.  ಡಿ.ಕೆ ಶಿವಕುಮಾರ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಹಿಂದೆ ಜನಾರ್ಧನ ರೆಡ್ಡಿ ಮೇಲೆ ದಾಳಿಯಾಗಿತ್ತು ಆಗ ಯಾರ ಪ್ರೇರಣೆಯಿಂದ ಸಿಬಿಐ ದಾಳಿಯಾಗಿತ್ತು..? ಎಂದು ಪ್ರಶ್ನಿಸಿದರು.

ಸಿಬಿಐ ದಾಳಿಯಾಗಿದ್ದಕ್ಕೆ  ಪದೇ ಪದೇ ಬಿಜೆಪಿ ಮೇಲೆ ಟೀಕೆ ಮಾಡುತ್ತಿದ್ದಾರೆ.  ಸಿಬಿಐ ಸ್ವತಂತ್ರ ಸಂಸ್ಥೆ ಡಿಕೆ ಶಿವಕುಮಾರ್  ಆರೋಪ ಸರಿಯಲ್ಲ ಎಂದು ಕಿಡಿಕಾರಿದರು.