ಮನೆ ಸುದ್ದಿ ಜಾಲ ಮೈಸೂರು: ಕಪಿಲಾ ನದಿ ನೀರು ಪೂರೈಕೆಗೆ ಶಾಸಕ ಜಿ.ಟಿ.ದೇವೇಗೌಡರಿಗೆ ಮನವಿ

ಮೈಸೂರು: ಕಪಿಲಾ ನದಿ ನೀರು ಪೂರೈಕೆಗೆ ಶಾಸಕ ಜಿ.ಟಿ.ದೇವೇಗೌಡರಿಗೆ ಮನವಿ

0

ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯ ಬಡಾವಣೆ ಮತ್ತು ಲಿಂಗಾಂಬುಧಿ ಪಾಳ್ಯಕ್ಕೆ ಕಪಿಲಾ ನದಿಯಿಂದ ನೀರು ಪೂರೈಕೆ ಮಾಡುವಂತೆ ಬಡಾವಣೆ ನಿವಾಸಿಗಳು ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಮೈಸೂರು ವಿಶ್ವವಿದ್ಯಾಲಯ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಣಯ್ಯ ಕೆ.ಎ. ನೇತೃತ್ವದಲ್ಲಿ ನಿವಾಸಿಗಳು ಶಾಸಕರನ್ನು ಭೇಟಿಯಾಗಿ, ನೀರಿನ ಸಮಸ್ಯೆಯನ್ನು ಗಮನಕ್ಕೆ ತಂದರು.

ಶ್ರೀರಾಂಪುರ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಸೇರುವ ನಮ್ಮ ಬಡಾವಣೆಗೆ ನೀರು ಒದಗಿಸುವ ಯೋಜನೆಯನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳಿಗೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಶಾಸಕರು, ಅಧಿಕಾರಿಗಳಿಗೆ ಕರೆ ಮಾಡಿ ಕಾಮಗಾರಿ ಆರಂಭಿಸುವುದಕ್ಕಾಗಿ ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬಡಾವಣೆಯ ನಿವಾಸಿಗಳಾದ ಡಾ.ಗೋವಿಂದರಾಜು, ಬಂಗಾರಪ್ಪ, ದಿನೇಶ್‌ ಇದ್ದರು.