ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಕ್ರೀಡಾ ಹಾಗೂ ಕಲಾಪ್ರೇಮಿಗಳು ಸಮಾಗಮಗೊಂಡಿದ್ದರು. ಗುಂಪು ಕ್ರೀಡೆ ಮತ್ತು ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆದರೆ, ವೇದಿಕೆಯಲ್ಲಿ ಸಾಂಸ್ಕೃತಿಕ ಸೊಬಗು ಮೇಳೈಸಿತು.
ರಾಜ್ಯ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೇಯರ್ ಶಿವಕುಮಾರ್ ಮಾತನಾಡಿ, ಸರ್ಕಾರಿ ವೃತ್ತಿಯಲ್ಲಿರುವವರು ಸದಾ ಒತ್ತಡದಿಂದ ಕೆಲಸ ನಿರ್ವಹಿಸುತ್ತಾರೆ. ಅವರು ಎಲ್ಲರಂತೆ ಮನುಷ್ಯರು, ಆರೋಗ್ಯದ ಬಗೆಗೆ ಅವರೂ ಅಗತ್ಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಉಪಮೇಯರ್ ಡಾ.ಜಿ.ರೂಪಾ, ನಗರಪಾಲಿಕೆ ಸದಸ್ಯ ಸತ್ಯರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಆರ್.ರೋಹಿತ್ ಗಂಗಾಧರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ರೇವಣ್ಣ ಇದ್ದರು.
ಸ್ಪರ್ಧೆಗಳ ಮಾಹಿತಿ:
ಮೊದಲ ದಿನ ಪುರುಷರು ಮತ್ತು ಮಹಿಳೆಯರಿಗೆ 5,000 ಮೀ., 1,500 ಮೀ., 800 ಮೀ., 400 ಮೀ., 200 ಮೀ., 100 ಮೀ. ಓಟದ ಸ್ಪರ್ಧೆ, ಗುಂಡು ಎಸೆತ, ಉದ್ದ ಜಿಗಿತ, ಭರ್ಜಿ ಎಸೆತ, 400 ಮೀ. ಮತ್ತು 100 ಮೀ. ಅಡೆತಡೆ ಓಟ, 4×100 ಮೀ. ರಿಲೇ ಸ್ಪರ್ಧೆಗಳು ನಡೆದವು.ಸಾಂಸ್ಕೃತಿಕ ಸ್ಪರ್ಧಾ ವಿಭಾಗದಲ್ಲಿ ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ, ಜಾನಪದ ಗೀತೆ, ಜಾನಪದ ನೃತ್ಯ, ಕಥಕ್, ಮಣಿಪುರಿ, ಕುಚುಪುಡಿ, ಕಥಕಳಿ, ಒಡಿಸ್ಸಿ, ಭರತನಾಟ್ಯ, ಸ್ಟ್ರಿಂಗ್ ವಾದ್ಯ, ವಿಂಡ್ ವಾದ್ಯ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.