ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): 14 ವರ್ಷದ ವಿಕಲಚೇತನ ಮಗಳನ್ನು ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಿಯಾಂಕಾ ತಾಯಿಯಿಂದ ಹತ್ಯೆಯಾದ ಮಗಳಾಗಿದ್ದಾಳೆ. ಮಗಳನ್ನು ಕೊಂದು ತಾಯಿ ಸುಮಾ ಸದ್ಯ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.
ಸುಮಾ ಅನೇಕ ವರ್ಷಗಳಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಸನ್ನ ಲೇಔಟ್ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಳು. ಒಂದು ವರ್ಷದ ಹಿಂದೆ ಈಕೆಯ ಪತಿ ಮೃತಪಟ್ಟಿದ್ದ. ಆದಾದ ಕೆಲ ದಿನಗಳಲ್ಲಿ ಮೂರು ವರ್ಷದ ಮಗುವನ್ನು ಸಹ ಸುಮಾ ಕಳೆದುಕೊಂಡಿದ್ದಳು. ಈಗ ಸುಮಾಳಿಂದ ಹತ್ಯೆಯಾಗಿರುವ ಪ್ರಿಯಾಂಕಾ ಸಹ ವಿಶೇಷಚೇತನೆಯಾಗಿದ್ದಳು.
ಇದರಿಂದ ಸಾಕಷ್ಟು ನೊಂದಿದ್ದ ಸುಮಾ ಖಿನ್ನತೆಗೆ ಒಳಗಾಗಿದ್ದಳು. ಸುಮಾ ಇದಕ್ಕೂ ಮುನ್ನ 3 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಅದೃಷ್ಟವಾಷತ್ ಪ್ರಾಣಪಾಯದಿಂದ ಪಾರಾಗಿದ್ದಳು. ಮೃತ ಪ್ರಿಯಾಂಕಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಿನ್ನೆ ತಾನೇ ಡಿಸ್ಚಾರ್ಜ್ ಮಾಡಿಕೊಂಡು ಬರಲಾಗಿತ್ತು. ಆದರೆ ಗಂಡ ಹಾಗೂ ಮಗುವನ್ನು ಕಳೆದುಕೊಂಡ ನೋವು ಒಂದು ಕಡೆ. ಇದ್ದೊಬ್ಬ ಮಗಳು ಸಹ ವಿಶೇಷಚೇತನೆಯಾಗಿದ್ದರಿಂದ ಮನನೊಂದ ಸುಮಾ ಇಂದು ಮನೆಯಲ್ಲೇ ಮಗಳನ್ನು ಕೊಂದು ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಸದ್ಯ ಗಂಭೀರ ಪರಿಸ್ಥಿತಿಯಲ್ಲಿರುವ ಸುಮಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಬ್ಯಾಡರಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.