ಮನೆ ಅಪರಾಧ ಬೆಂಗಳೂರು: ಚಾಕುವಿನಿಂದ ಇರಿದು ಯುವಕನ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ಯುವಕನ ಹತ್ಯೆ

0

ಬೆಂಗಳೂರು(Bengaluru): ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ತಡರಾತ್ರಿ ಹೆಗಡೆನಗರದ ಬಾಲಾಜಿ ಲೇಔಟ್​​ನಲ್ಲಿ ನಡೆದಿದೆ.

ಸಲ್ಮಾನ್ (20) ಕೊಲೆಯಾದ ಯುವಕ.

ಸಲ್ಮಾನ್ ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ತಂದೆಯ ಫರ್ನಿಚರ್ ಅಂಗಡಿ ಮತ್ತು ಹೋಟೆಲ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ಈ ದುಷ್ಕೃತ ನಡೆದಿದೆ.

ಮೂವರು ದುಷ್ಕರ್ಮಿಗಳು ಸಲ್ಮಾನ್​’ಗೆ ಚಾಕುವಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸಂಪಿಗೇಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ ಎಂಬುದಾಗಿ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.