ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮುಂಬೈ(Mumbai): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಉದ್ವಿಗ್ನತೆ ಮುಂದುವರೆದಿರುವ ಬೆನ್ನಲ್ಲೇ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್, ಚೀನಾ ಭಾರತದೊಳಕ್ಕೆ ನುಗ್ಗಿದಂತೆ ನಾವು ಕರ್ನಾಟಕದೊಳಗೆ ನುಗ್ಗಲಿದ್ದೇವೆ ಎಂಬ ಹೇಳಿಕೆ ವಿವಾದ ಸೃಷ್ಠಿಸಿದೆ.
ಚೀನಾ ಭಾರತಕ್ಕೆ ಪ್ರವೇಶ ಮಾಡಿದಂತೆ ನಾವು ಕರ್ನಾಟಕಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ. ನಾವು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಬಯಸುತ್ತೇವೆ. ಆದರೆ ಕರ್ನಾಟಕ ಮುಖ್ಯಮಂತ್ರಿ ಕಿಡಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರ ಇದ್ದು, ಈ ಬಗ್ಗೆ ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
ಸದ್ಯ ಮಹಾರಾಷ್ಟ್ರದಲ್ಲೂ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅಲ್ಲಿಯೂ ಗಡಿ ಸಂಬಂಧ ತೀವ್ರ ಚರ್ಚೆಗಳಾಗುತ್ತಿವೆ. ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ.
ಮಹಾರಾಷ್ಟ್ರದ ಲೋಕಸಭೆ ಸದಸ್ಯರೊಬ್ಬರನ್ನು ಬೆಳಗಾವಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ. ಯಾರನ್ನೂ ತಡೆಯಬಾರದು ಎಂದು ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಆದರೆ ಜಿಲ್ಲಾಧಿಕಾರಿ ನಿಷೇಧ ಹೇರಲು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಈ ಸಂಬಂಧ ಉತ್ತರಿಸಿದ ಮುಖ್ಯಮಂತ್ರಿ ಏಕನಾಥ ಶಿಂದೆ, ‘ಗಡಿ ಸಮಸ್ಯೆ ಸಂಬಂಧ ಇದೇ ಮೊದಲ ಬಾರಿಗೆ ದೇಶದ ಗೃಹ ಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ. ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನಾವು ನಮ್ಮ ವಾದವನ್ನು ಮುಂದಿಟ್ಟಿದ್ದೇವೆ. ಈಗ ನಾವು ಗಡಿ ಸಂಬಂಧ ರಾಜಕೀಯ ಮಾಡಬಾರದು. ಗಡಿ ಜನರ ಜತೆ ನಾವು ನಿಂತುಕೊಳ್ಳಬೇಕಿದೆ ಎಂದರು.
ಈ ಹಿಂದೆ ಶಿವಸೇನೆ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿಗೆ ಬರುವುದಾಗಿ ಘೋಷಣೆ ಮಾಡಿದ್ದರು. ಬೆಳಗಾವಿ ಪ್ರವೇಶಕ್ಕೆ ಅವರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಅದಕ್ಕೂ ಮುನ್ನ ಮಹಾರಾಷ್ಟ್ರ ಸಚಿವರ ತಂಡಕ್ಕೆ ಬೆಳಗಾವಿ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದರು.