ಮನೆ ರಾಜ್ಯ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರು ಎಸ್’ಪಿಯಾಗಿ ಸೀಮಾ ಲಾಟ್ಕರ್ ನೇಮಕ

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರು ಎಸ್’ಪಿಯಾಗಿ ಸೀಮಾ ಲಾಟ್ಕರ್ ನೇಮಕ

0

ಬೆಂಗಳೂರು(Bengaluru): ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು,  ಉನ್ನತ ಉದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ.

ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿತ್ತು. ಈ ನಂತರ ನಾಲ್ಕು ದಿನಗಳ ಹಿಂದೆ ಸಿವಿಲ್ ಡಿವೈಎಸ್ಪಿಗಳನ್ನು ಮತ್ತು ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಮೈಸೂರು ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್.ಚೇತನ್ ಅವರನ್ನು ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರು ವರಿಷ್ಟಾಧಿಕಾರಿಯನ್ನಾಗಿ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಮೈಸೂರಿನ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಎಂ.ಮುತ್ತುರಾಜ್ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ಬೆಂಗಳೂರು ಸಿಸಿಬಿ ಎಐಜಿಪಿ. ಶಿವಪ್ರಕಾಶ್ ದೇವರಾಜ್,  ಗದಗ ಪೊಲೀಸ್ ವರಿಷ್ಠಾಧಿಕಾರಿಯಾಗಿ  ಬಾಬಾಸಾಬ್ ನೇಮಗೌಡ ಅವರನ್ನು ನೇಮಿಸಲಾಗಿದೆ.

ರಾಜ್ಯ ಸರ್ಕಾರ  45 ಜನ ಸಿವಿಲ್ ಡಿವೈಎಸ್ಪಿಗಳು, 8 ಜನ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆಗೊಳಿಸಿ ಡಿಜಿಪಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದಾರೆ.