ಮನೆ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​ ಅಪಘಾತ: 7 ಮಂದಿ ಸ್ಥಿತಿ ಗಂಭೀರ

ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​ ಅಪಘಾತ: 7 ಮಂದಿ ಸ್ಥಿತಿ ಗಂಭೀರ

0

ಧಾರವಾಡ(Dharwad): ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​’ಗೆ ಲಾರಿ ಡಿಕ್ಕಿಯಾಗಿ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ತೇಗೂರು ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.

ವಿವಿಧ ಬೇಡಿಕೆ ಈಡೇರಿಸಬೇಕೆಂದು ಕೋರಿ ಬಳ್ಳಾರಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲು ಹೊರಟಿದ್ದರು.

ಈ ವೇಳೆ, ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್’​​​ಗೆ ಲಾರಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ 6 ರಿಂದ 7 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.