ಮನೆ ಅಪರಾಧ ಬೆಳ್ತಂಗಡಿ: ಬಸ್’ನ ಬ್ರೇಕ್ ಫೇಲ್- ಶಬರಿಮಲೆ ಯಾತ್ರಿಕರಿಗೆ ಗಾಯ

ಬೆಳ್ತಂಗಡಿ: ಬಸ್’ನ ಬ್ರೇಕ್ ಫೇಲ್- ಶಬರಿಮಲೆ ಯಾತ್ರಿಕರಿಗೆ ಗಾಯ

0

ಬೆಳ್ತಂಗಡಿ(Beltangadi): ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆಯಲ್ಲಿ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ್ದು, ಯಾತ್ರಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಕೂಡ್ಲಗಿ ತಾಲೂಕಿನ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ, ರಘು, ಬಸವರಾಜ್, ಲೋಕ ಎಂಬವರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತ ತಪ್ಪಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಲಿದ್ದು, ಒಟ್ಟು 6 ಆಂಬ್ಯುಲೆನ್ಸ್ ನಲ್ಲಿ ಪ್ರಯಾಣಿಕರನ್ನು ತಾಲೂಕಿನ ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.