ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ನಗರದಲ್ಲಿ ಗಾಂಜಾ, ಛರಸ್ ಮಾರಾಟ, ಮನೆ ಕಳ್ಳತನ, ಮಟ್ಕಾ ದಂಧೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು 13ಮಂದಿ ಆರೋಪಿಗಳನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ.
ಡಿ.15ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಉದಯಗಿರಿ ಠಾಣಾ ವ್ಯಾಪ್ತಿಯ ರಾಜೀವ್ ನಗರ 2ನೇ ಹಂತದ ಸೈಯದ್ ಅಬ್ದುಲ್ ರೆಹಮಾನ್ ರಸ್ತೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ಆತನ ವಶದಲ್ಲಿದ್ದ ಅಂದಾಜು ರೂ. 70 ಸಾವಿರ ರೂ. ಮೌಲ್ಯದ 1 ಕೆ.ಜಿ. 160 ಗ್ರಾಂ ಗಾಂಜಾ, ತೂಕದ ಯಂತ್ರ, 1,850 ನಗದು ಹಣ ಮತ್ತು ಒಂದು ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
3.50 ಲಕ್ಷ ರೂ.ನ ಛರಸ್ ವಶ: ಡಿ.19ರಂದು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಮೈಸೂರು ನಗರ ಆಲನಹಳ್ಳಿ ಠಾಣಾ ವ್ಯಾಪ್ತಿಯ ತಿ. ನರಸೀಪುರ ಮುಖ್ಯರಸ್ತೆಯ ಆಲನಹಳ್ಳಿ ಕೆರೆಗೆ ಹೊಂದಿಕೊಂಡಂತೆ ಇರುವ ಅರಳಿಮರದ ಬಳಿ ಒಬ್ಬ ಆರೋಪಿಯನ್ನು ಬಂಧಿಸಿ, ಆತನ ವಶದಲ್ಲಿದ್ದ ಅಂದಾಜು 3.50 ಲಕ್ಷ ರೂ.ಮೌಲ್ಯದ 126 ಗ್ರಾಂ ಛರಸ್, ತೂಕದ ಯಂತ್ರ ಮತ್ತು ಒಂದು ದ್ವಿ ಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ ದಂಧೆ 9 ಜನರ ಬಂಧನ: ಮಟ್ಕಾ ದಂಧೆ ನಡೆಸುತ್ತಿದ್ದ ಒಟ್ಟು 9 ಆರೋಪಿಗಳ ಬಂಧಿಸಿ, 33,330 ರೂ.ನಗದು ಮತ್ತು ದಾಖಲಾತಿಗಳು ವಶ ಪಡಿಸಿಕೊಳ್ಳಲಾಗಿದೆ. ಡಿ.12ರಂದು ಉದಯಗಿರಿ ಠಾಣಾ ವ್ಯಾಪ್ತಿಯ ಗೌಸಿಯಾನಗರದ ಸಿ ಬ್ಲಾಕ್’ನ ಸುಲ್ತಾನ್ ರಸ್ತೆಯಲ್ಲಿರುವ ಖದೀರ್ ಕೇರಂ ಬೋರ್ಡ್ ಕ್ಲಬ್ ಮುಂಭಾಗ ಮಟ್ಕಾ ದಂಧೆ ನಡೆಸುತ್ತಿದ್ದ 4 ಆರೋಪಿಗಳನ್ನು ಬಂಧಿಸಿ 18,110 ರೂ. ನಗದು ಹಣ ಹಾಗೂ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉದಯಗಿರಿ ಠಾಣಾ ಸರಹದ್ದಿನ ಗೌಸಿಯಾ ನಗರ ಸಿ ಬ್ಲಾಕ್, ಸುಲ್ತಾನ ರಸ್ತೆಯಲ್ಲಿರುವ ಇಮ್ರಾನ್ ಟೀ ಸ್ಟಾಲ್ ಮುಂಭಾಗ ಮಟ್ಕಾ ದಂಧೆ ನಡೆಸುತ್ತಿದ್ದ 03 ಆಸಾಮಿಗಳನ್ನು ಬಂಧಿಸಿದ್ದು 10,640 ರೂ. ನಗದು ಹಣ ಹಾಗೂ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ನರಸಿಂಹರಾಜ ಠಾಣಾ ವ್ಯಾಪ್ತಿಯ ಬಿ.ಬಿ.ಕೇರಿಯ ಮಂಟೇಸ್ವಾಮಿ ದೇವಸ್ಥಾನದ ರಸ್ತೆಯ 1ನೇ ಕ್ರಾಸ್ನಲ್ಲಿರುವ ಮನೆಯೊಂದರ ಮುಂಭಾಗ ಮಟ್ಕಾ ದಂಧೆ ನಡೆಸುತ್ತಿದ್ದ 2 ಆರೋಪಿಗಳನ್ನು ಬಂಧಿಸಿ, 4,580 ರೂ. ವಶಕ್ಕೆ ಪಡೆದಿದ್ದಾರೆ.
ಮನೆಗಳ್ಳರ ಬಂಧನ: ನ.22ರಂದು ನಗರ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು, ಆತನು ನೀಡಿದ ಮಾಹಿತಿ ಮೇರೆಗೆ ಡಿ.06ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳು ವಿಚಾರಣಾ ವೇಳೆ ಮೈಸೂರು ನಗರ ಸೇರಿದಂತೆ ವಿವಿಧ ಜಿಲ್ಲಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ 07 ಪ್ರಕರಣಗಳಿಗೆ ಸಂಬಂಧಪಟ್ಟಂತೆ 10 ಲಕ್ಷ ರೂ. ಮೌಲ್ಯದ 136 ಗ್ರಾಂ ಚಿನ್ನಾಭರಣ, 1 ದ್ವಿ ಚಕ್ರ ವಾಹನ, 3 ಮಾರುತಿ 800 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.