ಮನೆ ಸುದ್ದಿ ಜಾಲ ಮೈಸೂರು: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಮೈಸೂರು: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

0

ಮೈಸೂರು(Mysuru): ನೆಲದ ಮೇಲೆ ಬಿದ್ದದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಭಾನುವಾರ ನಡೆದಿದೆ.

ಮೃತ ಬಾಲಕನನ್ನು ನವೀನ್ (7) ಎಂದು ಗುರ್ತಿಸಲಾಗಿದೆ. ಈತ ಶಾಲೆಯ ದೈಹಿಕ ಶಿಕ್ಷಕ ಬಸವಣ್ಣ ಅವರ ಪುತ್ರನಾಗಿದ್ದಾನೆಂದು ತಿಳಿದುಬಂದಿದೆ.

ಶಾಲೆಯ ಡೈನಿಂಗ್ ಹಾಲ್’ನಲ್ಲಿ ಬಾಟಲಿಗೆ ನೀರು ತುಂಬಿಸುತ್ತಿದ್ದಾಗ ಈ ಘಟನೆ ನಡೆದಿದೆ.

ತಕ್ಷಣ ಮಗುವನ್ನು ನಂಜನಗೂಡಿನ ಕೃಷ್ಣಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದು, ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ಪಿಎಸ್‌’ಐ ಆರತಿ ಭೇಟಿ ನೀಡಿ ಘಟನೆಯ ಮಾಹಿತಿ ಕಲೆ ಹಾಕಿದ್ದಾರೆ.