ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತೋಟಗಾರಿಕೆ ಮತ್ತು ಯೋಜನಾ ಸಚಿವ ವಿ ಮುನಿರತ್ನ ಅವರು ಹೂಡಿದ್ದ ಕ್ರಿಮಿನಲ್ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಮತ್ತಿತರರಿಗೆ ಬೆಂಗಳೂರಿನ 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಸುಮಾರು ಅರ್ಧಗಂಟೆಗಳ ಕಾಲ ನಡೆದ ವಾದಸರಣಿ ಬಳಿಕ ನ್ಯಾಯಾಧೀಶರಾದ ಕೆ ಎನ್ ಶಿವಕುಮಾರ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್’ಪಿಸಿ ಸೆಕ್ಷನ್ 436 ಅನ್ವಯವಾಗುತ್ತದೆ. ಆ ಸೆಕ್ಷನ್ ಪ್ರಕಾರ ಜಾಮೀನು ನೀಡಬಹುದಾದ ಅಪರಾಧಗಳಿಗೆ ಜಾಮೀನು ನೀಡಬೇಕು ಎಂದು ತಿಳಿಸಿ ಷರತ್ತುಬದ್ಧ ಜಾಮೀನಿಗೆ ಆದೇಶಿಸಿದರು.
ಕೆಂಪಣ್ಣ ಹಾಗೂ ನಾಲ್ವರು ಆರೋಪಿಗಳು ಶ್ಯೂರಿಟಿ ಮತ್ತು ವೈಯಕ್ತಿಕ ಬಾಂಡ್ ನೀಡಬೇಕೆಂದು ನ್ಯಾಯಾಲಯ ಸೂಚಿಸಿತು. ಆದೇಶದಂತೆ ಕೆಂಪಣ್ಣ ಮತ್ತಿತರರು ಶನಿವಾರ ಮಧ್ಯರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇದಕ್ಕೂ ಮುನ್ನ ಡಿ. ಕೆಂಪಣ್ಣ ಪರ ವಕೀಲರು ಸಮನ್ಸ್ ಆದೇಶ ಕೈತಪ್ಪಿದ್ದರಿಂದ ತಮಗೆ ದಯವಿಟ್ಟು ಜಾಮೀನು ನೀಡಬೇಕು. ಪ್ರಕರಣದಲ್ಲಿ ಸೆಕ್ಷನ್ 436 ಅನ್ವಯಿಸುತ್ತದೆ. ಇದೊಂದು ಜಾಮೀನು ನೀಡಬಹುದಾದ ಪ್ರಕರಣ ಎಂದು ವಾದಿಸಿದರು. ಆದರೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು “ಸಿಆರ್’ಪಿಸಿ ಸೆಕ್ಷನ್ 88ರ ಪ್ರಕಾರ ಒಮ್ಮೆ ಬಂಧನ ವಾರೆಂಟ್ ಜಾರಿಗೊಳಿಸಿದ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದಾಗ ಮಾತ್ರ ಜಾಮೀನು ನೀಡಬಹುದೇ ವಿನಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಅಲ್ಲ. ಸಮನ್ಸ್ ನಿರಾಕರಿಸಿದ್ದಾಗ ಜಾಮೀನುರಹಿತ ವಾರೆಂಟ್ ಜಾರಿ ಮಾಡಲಾಗುತ್ತದೆ. ಆಗ ಸೆಕ್ಷನ್ 88ರ ಪ್ರಕಾರ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಅಲ್ಲಿಯವರೆಗೆ ಅವರನ್ನು ಬಿಡುಗಡೆ ಮಾಡುವಂತಿಲ್ಲ” ಎಂದಿದ್ದರು.