ಮನೆ ಸುದ್ದಿ ಜಾಲ ಮಡಿಕೇರಿ: ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

ಮಡಿಕೇರಿ: ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

0

ಮಡಿಕೇರಿ(Madikeri): ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡುವಿನ ಕಾಫಿತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಉಪಟಳ ನೀಡುತ್ತಿದ್ದ ಕಾಡಾನೆಯೊಂದನ್ನು ಸೆರೆ ಹಿಡಿಯಲಾಗಿದೆ.

ಅಂದಾಜು 18 ವರ್ಷದ ಈ ಆನೆ ಈ ಭಾಗದಲ್ಲಿ ಸಾಕಷ್ಟು ಬಾರಿ ರೈತರು ಹಾಗೂ ಅವರ ಜಮೀನಿನ ಮೇಲೆ ದಾಳಿ ನಡೆಸಿತ್ತು. ಮಂಗಳವಾರ ಕಾರ್ಯಾಚರಣೆ ವೇಳೆ ಈ ಆನೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಅಟ್ಟಾಡಿಸಿತ್ತು.

ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು, ಭೀಮ ಆನೆಗಳ ಸಹಾಯದಿಂದ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.