ಮನೆ ಅಪರಾಧ ಪ್ರಹ್ಲಾದ್ ಮೋದಿ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಎಫ್’ಐಆರ್

ಪ್ರಹ್ಲಾದ್ ಮೋದಿ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಎಫ್’ಐಆರ್

0

ಮೈಸೂರು(Mysuru): ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್‌ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿ ಕಾರು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ದೂರು ದಾಖಲಾಗಿದೆ.

ಮೈಸೂರು ದಕ್ಷಿಣ ಠಾಣೆಯಲ್ಲಿ ಐಪಿಸಿ ಕಲಂ 279 (ಅತಿಯಾದ ವೇಗ), 337 (ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಎಫ್‌’ಐಆರ್‌ ದಾಖಲಿಸಲಾಗಿದೆ.

ಡಿ.27ರಂದು ಪ್ರಹ್ಲಾದ್‌ ಮೋದಿ ಹಾಗೂ ಕುಟುಂಬದ ಮೂವರು ಸದಸ್ಯರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್‌ ಬೆಂಜ್‌ ಕಾರು ಕಡಕೋಳದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು.

ಚಾಲನಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಲೇ ಕಾರು ಅಪಘಾತಕ್ಕೀಡಾಗಿದೆ ಎಂದು ಬೆಂಗಾವಲು ಪಡೆಯ ಎಆರ್‌’ಎಸ್‌’ಐ ಎಸ್‌.ಮಹದೇವ ದೂರು ನೀಡಿದ್ದರು.