ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನ್ಯಾಯಾಲಯದ ಆದೇಶದ ಹೊರತಾಗಿಯೂ ಎಂಬಿಬಿಎಸ್ ಕೋರ್ಸ್ ಪ್ರವೇಶಕ್ಕೆ ರಾಜ್ಯದ ಕ್ರೀಡಾ ಕೋಟಾದ ರ್ಯಾಂಕಿಂಗ್ ಅನ್ನು ಹೊಸದಾಗಿ ನಿಗದಿಪಡಿಸದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯಕಾರಿ ನಿರ್ದೇಶಕಿ ಎಸ್ ರಮ್ಯಾ ಮತ್ತು ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದೆ.
ಈಜು ಡೈವಿಂಗ್’ನಲ್ಲಿ ಚಾಂಪಿಯನ್ ಆಗಿರುವ ವಿದ್ಯಾರ್ಥಿನಿ ಅದಿತಿ ದಿನೇಶ್ ರಾವ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳದ ಮೊಹಮ್ಮದ್ ನವಾಜ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಎಂಬಿಬಿಎಸ್ ಸೀಟು ಸಿಗದೆ ಬಿಡಿಎಸ್ ಕೋರ್ಸ್ ಸೇರಿದ್ದ ಅಭ್ಯರ್ಥಿ ಅದಿತಿ ಅವರು ಮೂವರು ಚೆಸ್ ಆಟಗಾರರಾದ ಸಾತ್ವಿಕ್ ಶಿವಾನಂದ್, ಎಸ್ ಆರ್ ಪ್ರತಿಮಾ ಮತ್ತು ಖುಷಿ ಎಂ.ಹೊಂಬಾಳ್ ಅವರಿಗೆ ಕ್ರೀಡಾಕೋಟಾದಲ್ಲಿ ಪ್ರವೇಶ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದರು.
ಅರ್ಜಿಯನ್ನು 2022ರ ಡಿಸೆಂಬರ್ 13ರಂದು ಭಾಗಶಃ ಮಾನ್ಯ ಮಾಡಿದ್ದ ಹೈಕೋರ್ಟ್, ಕ್ರೀಡಾ ಕೋಟಾದಡಿ ಪ್ರವೇಶ ಪಡೆಯಬೇಕಾದರೆ ಅಭ್ಯರ್ಥಿಗಳು ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್’ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಜಯಿಸಿರಬೇಕು. ಅದರಂತೆ ಅದಿತಿ ಭಾರತೀಯ ಈಜು ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್ಶಿಪ್’ಗಳಲ್ಲಿ 4 ಚಿನ್ನ, 3 ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆದ್ದಿದ್ದಾರೆ. ಆದರೆ, ಪ್ರತಿವಾದಿ ಮೂವರು ಚೆಸ್ ಆಟಗಾರರು ಪದಕಗಳನ್ನು ಗೆದ್ದ ಬಗ್ಗೆ ಯಾವುದೇ ದಾಖಲೆ ಇಲ್ಲ. ಆದ್ದರಿಂದ ಹೊಸದಾಗಿ ರ್ಯಾಂಕಿಂಗ್ ನಿಗದಿಪಡಿಸುವಂತೆ ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೆಇಎಗೆ ಆದೇಶಿಸಿತ್ತು.
ಈವೆರಗೂ ಹೊಸದಾಗಿ ರ್ಯಾಂಕಿಂಗ್ ನಿಗದಿಪಡಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅದಿತಿ, ಉದ್ದೇಶಪೂರ್ವಕವಾಗಿಯೇ ಹೈಕೋರ್ಟ್ ನ್ಯಾಯಾಲಯದ ಆದೇಶವನ್ನು ಕೆಇಎ ಮತ್ತು ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಪಾಲಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಇದೇ ವೇಳೆ ಕ್ರೀಡಾ ಕೋಟಾದಡಿ ಎಂಬಿಬಿಎಸ್ ವೈದ್ಯಕೀಯ ಕೋರ್ಸ್ ಪ್ರವೇಶದಿಂದ ವಂಚಿತರಾದ ಈಜುಪಟು ಸಿರಿ ಶ್ರೀಕಾಂತ್ ಮತ್ತು ಸ್ಕೇಟಿಂಗ್ ಪಟು ಅನುಷ್ ಗೌಡ ಹೈಕೋರ್ಟ್’ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಹೊಸದಾಗಿ ರ್ಯಾಂಕಿಂಗ್ ಪಟ್ಟಿ ನಿಗದಿಪಡಿಸುವ ವೇಳೆ ತಮ್ಮ ಹೆಸರು ಪರಿಗಣಿಸುವಂತೆ ಕೆಇಎ ಮತ್ತು ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದರು. ಆದರೆ, ಪ್ರತಿವಾದಿಗಳ ವಾದ ಆಲಿಸದೆ ಮಧ್ಯಂತರ ಮನವಿ ಪುರಸ್ಕರಿಸಲಾಗದು ಎಂದು ತಿಳಿಸಿದ ಪೀಠವು ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತು.