ಮನೆ ಸುದ್ದಿ ಜಾಲ ಮೈಸೂರು: ಆನೆ ದಾಳಿಗೆ ಮಹಿಳೆ ಸಾವು, ಓರ್ವನ ಸ್ಥಿತಿ ಗಂಭೀರ

ಮೈಸೂರು: ಆನೆ ದಾಳಿಗೆ ಮಹಿಳೆ ಸಾವು, ಓರ್ವನ ಸ್ಥಿತಿ ಗಂಭೀರ

0
ಸಾಂದರ್ಭಿಕ ಚಿತ್ರ

ಮೈಸೂರು(Mysuru): ಆನೆ ದಾಳಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ.

ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತ ದುರ್ದೈವಿ. ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಜಮೀನಿನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದರು, ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ.

ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ಆನೆ ದಾಳಿ ಮಾಡಿದೆ.

ಮೃತರ ಕುಟುಂಬಸ್ಥರನ್ನು ಶಾಸಕ ಜಿ.ಟಿ.ದೇವೆಗೌಡ. ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.