ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲೀಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆ-1956ರ ಸೆಕ್ಷನ್ 3 ರ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ತಮ್ಮ ವಿರುದ್ಧ ಚಂದ್ರಲೇಔಟ್ ಠಾಣೆ ಪೊಲೀಸರು ದಾಖಲಿಸಿರುವ ಎಫ್’ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬೆಂಗಳೂರಿನ 66 ವರ್ಷದ ನಿವಾಸಿ ಪ್ರಭುರಾಜ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ತೀರ್ಪು ಪ್ರಕಟಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಅನುಸಾರ ಮನೆ ಅಥವಾ ಜಾಗದ ಮಾಲೀಕನಿಗೆ ಅಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಮಾಹಿತಿ ಇದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದು. ಈ ಪ್ರಕರಣದಲ್ಲಿ ಅರ್ಜಿದಾರರಿಗೆ ತಮ್ಮ ಒಡೆತನದ ಜಾಗದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಇಲ್ಲ. ದೋಷಾರೋಪಣೆಯಲ್ಲೂ ಪೊಲೀಸರು ಈ ಅಂಶ ಉಲ್ಲೇಖಿಸಿದ್ದಾರೆ. ಹೀಗಾಗಿ, ಅರ್ಜಿದಾರರ ವಿರುದ್ಧ ಕ್ರಮ ಜರುಗಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸಿ ಆದೇಶಿಸಿರುವ ಪೀಠ, ಹೈಕೋರ್ಟ್’ ನ ಈ ತೀರ್ಪು ಪ್ರಕರಣದ ಇತರೆ ಆರೋಪಿಗಳ ವಿರುದ್ಧದ ವಿಚಾರಣೆಯ ಮೇಲೆ ಯಾವುದೇ ಪ್ರಭಾವ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಹಿನ್ನೆಲೆ: ಅರ್ಜಿದಾರರಾದ ಪ್ರಭುರಾಜ್ ನಾಗರಭಾವಿಯ ತಮ್ಮ ಮನೆಯನ್ನು 2019ರ ಡಿಸೆಂಬರ್ 11ರಂದು ವ್ಯಕ್ತಿಯೊಬ್ಬರಿಗೆ (ಪ್ರಕರಣದ ಮೊದಲ ಆರೋಪಿ) ಬಾಡಿಗೆಗೆ ನೀಡಿದ್ದರು. 2020ರ ಜನವರಿ 25ರಂದು ಚಂದ್ರಲೇಔಟ್ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತಂತೆ ಎಫ್ಐಆರ್ ದಾಖಲಿಸಿದ್ದರು. ಈ ವೇಳೆ ಮನೆ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ಜತೆ ಮನೆ ಮಾಲೀಕರ ವಿರುದ್ಧವೂ ಮಾನವ ಕಳ್ಳ ಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3, 4, 5, 6 ಹಾಗೂ ಐಪಿಸಿ 370 ಅಡಿ ಅಡಿ ಎಫ್ಐಆರ್ ದಾಖಲಿಸಿದ್ದರು.
ತನಿಖೆ ವೇಳೆ ಮನೆ ಮಾಲಿಕರು, ಬಾಡಿಗೆದಾರ ವ್ಯಕ್ತಿ ವೇಶ್ಯವಾಟಿಕೆ ನಡೆಸುತ್ತಿದ್ದ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆ ನಂತರವೂ ಪೊಲೀಸರು ದೋಷಾರೋಪಣೆಯಲ್ಲಿ ಮನೆ ಮಾಲಿಕರನ್ನೂ ಆರೋಪಿಯಾಗಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಭುರಾಜ್ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.