ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ‘ಮಹಾನ್ ಸಂತ ಭಕ್ತ ಕನಕದಾಸ ಸೇವಾ ಸಮಿತಿ’ ಮತ್ತು ಕನಕ ಯುವ ಸೇನಾ ಸಹಯೋಗದಲ್ಲಿ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಶನಿವಾರ ನಡೆದ ಮೆರವಣಿಗೆ ಸಾರ್ವಜನಿಕರ ಕಣ್ಮನ ಸೆಳೆಯಿತು.
ಕನಕದಾಸ ಸೇರಿದಂತೆ ಎಲ್ಲ ಸಮುದಾಯದ ಮಹನೀಯರ ಫೋಟೊಗಳ ಮೆರವಣಿಗೆಗೆ ಜಾನಪದ ಕಲಾತಂಡಗಳ ನೃತ್ಯ ವೈಭವ ಮೆರುಗು ನೀಡಿತು.
ಸಾಹುಕಾರ್ ಚನ್ನಯ್ಯ ರಸ್ತೆಯಲ್ಲಿರುವ ಶ್ರೀಕೃಷ್ಣಧಾಮದ ಎದುರಿನಿಂದ ಆರಂಭವಾದ ಮೆರವಣಿಗೆಗೆ ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಎಂ.ಕೆ.ಸೋಮಶೇಖರ್, ಕೆ.ಮರೀಗೌಡ, ನಗರಪಾಲಿಕೆ ಸದಸ್ಯ ಜೆ.ಗೋಪಿ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು.ಕನಕದಾಸ, ಬುದ್ಧ, ಬಸವಣ್ಣ, ಅಂಬೇಡ್ಕರ್, ಬಾಬು ಜಗಜೀವನ್ ರಾಂ, ಮಹರ್ಷಿ ವಾಲ್ಮೀಕಿ, ನಾರಾಯಣ ಗುರು, ಸಂಗೊಳ್ಳಿ ರಾಯಣ್ಣ, ಶಾಹು ಮಹಾರಾಜ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮೊದಲಾದ ಸಮಾಜ ಸುಧಾರಕರ ಫೋಟೊಗಳನ್ನು ಮೆರವಣಿಗೆ ಮಾಡಲಾಯಿತು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಮುಖಂಡರಾದ ಕೆ.ಹರೀಶ್ ಗೌಡ, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಡಿ.ನಾಗಭೂಷಣ್, ಎಂ.ಶಿವಣ್ಣ, ಜೆ.ಎಸ್.ಜಗದೀಶ್, ಹರೀಶ್ ಮೊಗಣ್ಣ, ರೇಖಾಪ್ರಿಯ, ನಾಗರಾಜು, ರೇವಣ್ಣ, ಭಕ್ತಕನಕದಾಸ ಸೇವಾ ಸಮಿತಿಯ ಮರಿಸ್ವಾಮಿ, ಬೀರೇಗೌಡ, ಮಹದೇವ, ರಾಜು, ಬಿ.ಬಸವರಾಜು, ರಮೇಶ್, ಕುನ್ನೇಗೌಡ, ಬಸವಯ್ಯ, ಮಹದೇವ, ವೆಂಕಟಪ್ಪ, ಕನಕ ಯುವ ಸಮಿತಿಯ ಬಿ.ಕುಮಾರ, ಸ್ವಾಮಿ, ರವಿಕುಮಾರ್, ಪಿ.ನಾಗರಾಜು ಇದ್ದರು.