ಮನೆ ಅಪರಾಧ ಡೆತ್ ನೋಟ್ ಬರೆದಿಟ್ಟು ಕಾರಿನಲ್ಲೇ ಉದ್ಯಮಿ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಕಾರಿನಲ್ಲೇ ಉದ್ಯಮಿ ಆತ್ಮಹತ್ಯೆ

0

ರಾಮನಗರ(Ramnagar): ಡೆತ್ ನೋಟ್ ಬರೆದಿಟ್ಟು, ಉದ್ಯಮಿಯೊಬ್ಬರು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಭಾನುವಾರ ಸಂಜೆ ನಡೆದಿದೆ.

ಬೆಂಗಳೂರಿನ ‌ಹೆಚ್​​ಎಸ್​​ಆರ್ ಲೇಔಟ್ ನಿವಾಸಿ ಪ್ರದೀಪ್ (47) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಉದ್ಯಮಿ ಪ್ರದೀಪ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಡೆತ್ ನೋಟ್​​ನಲ್ಲಿ ಪ್ರಭಾವಿ ರಾಜಕಾರಣಿ ‌ಸೇರಿದಂತೆ ಆರು ಜನರ ಹೆಸರು ಬರೆದಿಟ್ಟಿದ್ದಲ್ಲದೆ, ಸಾವಿನ ಬಗ್ಗೆಯೂ ವಿವರವಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಗ್ಗಲಿಪುರ ಪೊಲೀಸ್​ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.