ಮನೆ ರಾಜ್ಯ 42 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

42 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

0

ಬೆಂಗಳೂರು: ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್, ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಉಮೇಶ್ ಶಂಕರ್, ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿ ರಿತ್ವಿಕ್ ರಾಜನಂ ಪಾಂಡೆ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್.ಪಿ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್, ಕಂದಾಯ ಮತ್ತು  ಭೂ ದಾಖಲೆ ಇಲಾಖೆಯ ಆಯುಕ್ತರಾದ ಮೌನಿಶ್ ಮೌದ್ಗಲ್, ಬಿಬಿಎಂಪಿ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ, ಕರ್ನಾಟಕ ನಗರ ನೀರು ಸರಬರಾದು ಮತ್ತು ನೈರ್ಮಲೀಕರಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮೋಹನ್ ರಾಜ್, ಸರ್ಕಾರಿ ಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಅಂಕಿಅಂಶಗಳ ಇಲಾಖೆ ಕಾರ್ಯದರ್ಶಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಕಲಬುರ್ಗಿ ಜಿಲ್ಲಾಧಿಕಾರಿ ಯಶ್ವಂತ್ ವಿ ಗುರುಕರ್, ಕೇಂದ್ರ ಹಣಕಾಸು ಇಲಾಖೆ ಆಪ್ತ ಕಾರ್ಯದರ್ಶಿ ನಕುಲ್ ಎಸ್.ಎಸ್, ಇ ಗೌರ್ನಮೆಂಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ.ಪಿ.ಐ, ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತೆ ಕನಗವಲ್ಲಿ, ಕೌಶಲ್ಯಾಭಿವೃದ್ಧಿ ಇಲಾಖೆ ಆಪ್ತ ಕಾರ್ಯದರ್ಶಿ ಶಿವಕುಮಾರ್ ಕೆ.ಬಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಎಸ್ಟೇಟ್) ವಿಶೇಷ ಆಯುಕ್ತ ಡಾ.ರಾಮ್ ಪ್ರಸಾದ್ ಮನೋಹರ್, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್ ವ್ಯವಸ್ಥಾಪಕ ನಿರ್ದೇಶಕ ವಾಸಿರೆಡ್ಡಿ ವಿಜಯ ಜೋತ್ಸ್ನಾ, ಪೌರಾಡಳಿತ ನಿರ್ದೇಶಕಿ ಮಂಜುಶ್ರೀ.ಎನ್, ಮುಖ್ಯ ಚುನಾವಣಾಧಿಕಾರಿ ಮತ್ತು ಡಿಪಿಎಆರ್ ವೆಂಕಟೇಶ್ ಕುಮಾರ್.ಆರ್, ಕರ್ನಾಟಕ ರಾಜ್ಯ ಖನಿಜ ನಿಗಮ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಪ್ರಿಯ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಜ್ಪೈ, ಸಹಕಾರ ಸಂಘಗಳ ರಿಜಿಸ್ಟ್ರಾರ್ ಡಾ.ರಾಜೇಂದ್ರ.ಕೆ, ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್.ಬಿ.ಎಸ್, ಆಯುಷ್ ಇಲಾಖೆ ಆಯುಕ್ತ ಮಂಜುನಾಥ್.ಜಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ ಆಯುಕ್ತ ಗಿರೀಶ್.ಆರ್, ಇನ್’ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಅಂಚೆ ವಿಭಾಗದ ಆಯುಕ್ತೆ ಡಾ.ಮಮತ ಬಿ.ಆರ್, ಬೆಳಗಾವಿ ಪ್ರಾದೇಶಿಕ ಆಯುಕ್ತ ಹಿರೇಮಠ, ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು, ಬೆಂಗಳೂರಿನ ಆರ್’ಡಿಪಿಆರ್ ಇ ಆಡಳಿತ ನಿರ್ದೇಶಕ ಶುಭ ಕಲ್ಯಾಣ್, ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತೆ ಶಿಲ್ಪಾ ನಾಗ್, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ನಲ್ಮಿ ಅತುಲ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪ ಕಾರ್ಯದರ್ಶಿ ಗಂಗಾಧರ ಸ್ವಾಮಿ, ತುಮಕೂರು ಸಿಇಒ ವಿದ್ಯಾಕುಮಾರಿ, ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ವರ್ಣಿತ್ ನೇಗಿ, ಬಿಬಿಎಂಪಿ ಉಪ ಆಯುಕ್ತ ರಾಹುಲ್ ಶರಣಪ್ಪ ಸಂಕನೂರು, ಕೊಡಗು ಸಿಇಒ ಡಾ.ಆಕಾಶ್.ಎಸ್, ಬಿಬಿಎಂಪಿ ವಿಶೇಷ ಭೂಸ್ವಾಧೀನಾಧಿಕಾರಿ ಪ್ರತೀಕ್ ಬಾಯಲ್, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶಕ ಅಶ್ವಿಜ.ಬಿ.ವಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಮೋನಾ ರೋತ್ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳ ಉಪ ಕಾರ್ಯದರ್ಶಿ ಆನಂದ್ ಪ್ರಕಾಶ್ ಮೀನಾ ಅವರನ್ನು ವರ್ಗಾವಣೆ ಮಾಡಲಾಗಿದೆ.