ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru) : ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಕೋಪಗೊಂಡ ಅಬಕಾರಿ ಇನ್ಸ್ಪೆಕ್ಟರ್ ಬಾರ್ ಅಂಡ್ ರೆಸ್ಟೊರೆಂಟ್’ಗೆ ಬೆಂಕಿ ಹಚ್ಚಿಸಿರುವ ಘಟನೆ ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ.
ಕೆಂಗೇರಿ ವಲಯ ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಚ್ಚಿಸಿದ ಅಧಿಕಾರಿ. ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಾನುವಾರ ಮಧ್ಯರಾತ್ರಿ ಬಾರ್ ಅಂಡ್ ರೆಸ್ಟೋರೆಂಟ್’ಗೆ ಬೆಂಕಿ ಹಚ್ಚಿದ್ದು, ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು, ಮದ್ಯ ಬೆಂಕಿಗಾಹುತಿಯಾಗಿದೆ. ಮೊದಲು ಇದು ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದ ವರದಿ ನೀಡಿದ್ದಾರೆ.
ಏನಿದು ಪ್ರಕರಣ.?
ಮಾಚೋಹಳ್ಳಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ರಾಮಕೃಷ್ಣ ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲೀಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲಿಕತ್ವದ ಬಾರ್ ಗೆ ಬೆಂಕಿ ಇರಿಸಿದ ಗಂಭೀರ ಆರೋಪ ಕೇಳಿ ಬಂದಿದೆ.