ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕರ್ನಾಟಕದ ಜನತೆ ಅಭಿವೃದ್ಧಿ, ಸಮೃದ್ಧಿಯಾಗುವಂತೆ ದೇವರಲ್ಲಿ ಬೇಡಿಕೊಂಡಿದ್ದು, ಖಂಡಿತವಾಗಿ 2023 ರಲ್ಲಿ ವೆಂಕಟೇಶ್ವರನ ಆಶೀರ್ವಾದ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ವೈಯ್ಯಾಲಿಕಾವಲ್ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸ, ಆಡಳಿತದ ಆಧಾರದ ಮೇಲೆ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಹಿಂದೂ ಧರ್ಮದಲ್ಲಿ ಪವಿತ್ರವಾದ ದಿನ. ಇಂದು ವೆಂಕಟೇಶ್ವರನ ದರ್ಶನ ಮಾಡಬೇಕೆಂದು ಪ್ರತೀತಿ. ತಿರುಪತಿಗೆ ಹೋಗಲು ಸಾಧ್ಯವಿಲ್ಲದಿರುವರರಿಂದ ಟಿಟಿಡಿ ಯವರ ದೇವಸ್ಥಾನಕ್ಕೆ ಬಂದು ಪುನೀತ ಭಾವನೆ ಮೂಡಿದೆ. ವೆಂಕಟೇಶ್ವರ ಎಂದರೆ ಅಭಿವೃದ್ಧಿ, ಸಮೃದ್ಧಿಯ ಸಂಕೇತ. ಕರ್ನಾಟಕ ಹಿಂದೆಂದೂ ಕಾಣದ ಅಭಿವೃದ್ಧಿ ಕಾಣಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ಉದ್ಯಮಿ ಪ್ರದೀಪ್ ಅವರು ಶಾಸಕ ಅರವಿಂದ ಲಿಂಬಾವಳಿ ಯವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಎಫ್.ಐ.ಆರ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕ್ರಿಯೆ ಏನಾಗಬೇಕೋ ಆಗಿದೆ. ಮುಂದೂ ಕೂಡ ಕಾನೂನು ಪ್ರಕಾರವಾಗಿ ಆಗಲಿದೆ ಎಂದರು.
ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ನಿರಂತರ ಮಾಹಿತಿ
ಸಿದ್ದೇಶ್ವರ ಶ್ರೀಗಳ ಆರೋಗ್ಯದ ಬಗ್ಗೆ ಮಾತನಾಡಿ ಅವರನ್ನು ಭೇಟಿಯಾದಾಗ ಗುರುತು ಹಿಡಿದರು. ಮಾತನಾಡಲು ಆಗುತ್ತಿರಲಿಲ್ಲ ಎನ್ನುವುದನ್ನು ಬಿಟ್ಟರೇ ಅವರ ಎಲ್ಲಾ ಅಂಗಾಂಗಗಳ ಮಾನದಂಡಗಳು ಸಾಮಾನ್ಯವಾಗಿಯೇ ಇತ್ತು. ಇಂದೂ ಕೂಡ ಅವರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸಂಬಂಧ ಪಟ್ಟವರ ಸಂಪರ್ಕದಲ್ಲಿದ್ದೇನೆ. ಯಾವುದೇ ಆತಂಕಕ್ಕೆ ಅವಕಾಶವಿಲ್ಲ. ಸಿದ್ಧೇಶ್ವರ ಸ್ವಾಮಿಗಳಿಗೆ ಅವರದ್ದೇ ಆದ ಅಂತರ್ಗತ ಶಕ್ತಿ ಇದೆ. ಅದರ ಮೂಲಕ ಅನಾರೋಗ್ಯವನ್ನು ಗೆದ್ದು ಜಯಶಾಲಿಯಾಗಿ ಬರುತ್ತಾರೆ. ದೀರ್ಘಕಾಲ ನಮ್ಮ ಜೊತೆಗಿದ್ದು, ಆಶೀರ್ವಾದ ಮಾರ್ಗದರ್ಶನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.