ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಪ್ರಗತಿ ಪರ ವಿಚಾರಗಳ ಕುರಿತು ಮುಕ್ತವಾಗಿ ಪೋಸ್ಟ್ ಹಾಕುತ್ತಿದ್ದ ನಟ ಕಿಶೋರ್ ಅವರ ಟ್ವಿಟರ್ ಖಾತೆ ಅಮಾನತು ಮಾಡಲಾಗಿದೆ.
ಖಾತೆಯನ್ನು ಹುಡುಕಿ ನೋಡಿದಾಗ ಟ್ವಿಟರ್’ನಿಂದಲೇ ಅವರ ಅಧಿಕೃತ @actorkishore ಅಕೌಂಟ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಕಿಶೋರ್ ಅವರು ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಖಾತೆ ಅಮಾನತಿಗೆ ಕಾರಣಗಳು ತಿಳಿದು ಬಂದಿಲ್ಲ.
ನಟಿ ಸಾಯಿ ಪಲ್ಲವಿ ವಿವಾದವಾದಾಗಲೂ ನಟ ಕಿಶೋರ್, ಜನಗಳ ಬಾಯಿ ಮುಚ್ಚಿಸುವುದು ಸರ್ಕಾರದ ಕೆಲಸವಲ್ಲವೇ, ಈ ಕೆಲಸದ ಗುತ್ತಿಗೆಯನ್ನು ಮಾಧ್ಯಮ ಯಾವಾಗ ಪಡೆದುಕೊಂಡಿತು? ಸಿನಿಮಾ ಕರ್ಮಿಗಳು, ನಟ-ನಟಿಯರು ಸಾಮಾಜಿಕ ಅಭಿಪ್ರಾಯವನ್ನು ಹೊಂದುವುದು ಅಪರಾಧವೇ?’ ಎಂದು ಕಿಶೋರ್ ಪ್ರಶ್ನೆ ಮಾಡಿದ್ದರು.
ಕಾಶ್ಮೀರಿ ಪಂಡಿತರ ಹತ್ಯೆ, ಮುಸ್ಲಿಮರ ಮೇಲೆ ದಾಳಿ ಎರಡೂ ಒಂದೇ ಎಂದು ಸಾಯಿ ಪಲ್ಲವಿ ಹೇಳಿದ್ದರು.
ಕಾಂತಾರ ಸಿನಿಮಾ ವಿವಾದವಾದಾಗಲೂ ಕಿಶೋರ್ ಪ್ರತಿಕ್ರಿಯಿಸಿದ್ದರು. ನಂಬಿಕೆ ಇರಬೇಕು, ಆದರೆ, ಮೂಢನಂಬಿಕೆ ಇರಬಾರದು ಎಂದು ಹೇಳಿದ್ದರು. ಎಲ್ಲ ಒಳ್ಳೆಯ ಸಿನಿಮಾಗಳಂತೆ ಕಾಂತಾರ ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದಿದ್ದರು.