ಮನೆ ರಾಜಕೀಯ ‘ಬೂತ್ ವಿಜಯ ಅಭಿಯಾನ’ಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ

‘ಬೂತ್ ವಿಜಯ ಅಭಿಯಾನ’ಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ

0

ಮೈಸೂರು(Mysuru): ಬಿಜೆಪಿಯಿಂದ ಹಮ್ಮಿಕೊಂಡಿರುವ ‘ಬೂತ್ ವಿಜಯ ಅಭಿಯಾನ’ಕ್ಕೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಾಳಿದಾಸ ರಸ್ತೆಯ ರಾಘವೇಂದ್ರ ಸ್ವಾಮಿ ಮಠದ ಬಳಿ ಮನೆಗೆ ಪಕ್ಷದ ಬಾವುಟ ಕಟ್ಟುವ ಮೂಲಕ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗಳ ಮೇಲೂ ಪಕ್ಷದ ಬಾವುಟ ಹಾರಿಸಿ, ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಆಲಿಸಲು ವಾಟ್ಸ್‌’ಆ್ಯಪ್‌ ಗುಂಪುಗಳನ್ನು ರಚಿಸಿ, ಅವುಗಳಿಗೆ ಪರಿಹಾರ ಕಲ್ಪಿಸಲು ಮುಂದಾಗಬೇಕು ಎಂದರು.

ಶಾಸಕ ಎಲ್.ನಾಗೇಂದ್ರ ಮಾತನಾಡಿ, ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ 245 ಬೂತ್‌ ಇವೆ. ಅಲ್ಲಿನ ಮನೆಗಳನ್ನು ಸಂಪರ್ಕಿಸಿ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಮುಖಂಡರಾದ ಸೋಮಶೇಖರ ರಾಜು, ಎಸ್.ಸೋಮಶೇಖರ್, ಜಯಪ್ರಕಾಶ್, ಎಂ.ಯು. ಸುಬ್ಬಯ್ಯ, ಪ್ರಮಿಳಾ ಭರತ್, ರಂಗಸ್ವಾಮಿ, ಸತೀಶ್, ರವೀಂದ್ರ, ವೇದಾವತಿ, ಚಿಕ್ಕವೆಂಕಟ್, ರಮೇಶ್, ಪುನೀತ್ ಇದ್ದರು.