ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹೊಸಪೇಟೆ (ವಿಜಯನಗರ): ಯಾರೇ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಇನ್ನೇನಾದರೂ ಅವರು ಹೇಳಿಕೊಳ್ಳಲಿ. ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ನೂರಕ್ಕೆ ನೂರರಷ್ಟು ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳವಾರ ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.
ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷದ ಪರ ಅಲೆ ಇರುವುದರಿಂದಲೇ ಈ ಸಲ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.
ಈ ಹಿಂದೆ ಎಸ್. ಬಂಗಾರಪ್ಪ, ಬಿ.ಎಸ್. ಯಡಿಯೂರಪ್ಪ, ಬಿ.ಶ್ರೀರಾಮುಲು ಸೇರಿದಂತೆ ಹಲವರು ಪಕ್ಷ ಕಟ್ಟಿದ್ದರು. ಏನಾಗಿದೆ ಎನ್ನುವುದು ಎಲ್ಲರಿಗೂ ಅದರ ಇತಿಹಾಸ ಗೊತ್ತಿದೆ. ಹಾಗಂತ ನಾನು ಅವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾನೆ ಎಂದರ್ಥವಲ್ಲ. ಪ್ರಜಾಪ್ರಭುತ್ವದಲ್ಲಿ ಅಂತಿಮವಾಗಿ ಮತದಾರರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.ಶಾಸಕರಾದ ಭೀಮ ನಾಯ್ಕ, ಜೆ.ಎನ್. ಗಣೇಶ್, ಪಿ.ಟಿ. ಪರಮೇಶ್ವರ ನಾಯ್ಕ, ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಮಹಮ್ಮದ್ ರಫೀಕ್, ಗ್ರಾಮೀಣ ಅಧ್ಯಕ್ಷ ಬಿ.ವಿ. ಶಿವಯೋಗಿ,ಮುಖಂಡರಾದ ಸಂತೋಷ ಲಾಡ್ ಇತರರಿದ್ದರು.