ಮನೆ ರಾಜ್ಯ ದೇವಸ್ಥಾನದ ಅಡುಗೆ ಮನೆಯಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

ದೇವಸ್ಥಾನದ ಅಡುಗೆ ಮನೆಯಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

0

ಹುಬ್ಬಳ್ಳಿ(Hubballi): ಅಡುಗೆ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದ ಅಡುಗೆ ಮನೆಯಲ್ಲಿ  ನಡೆದಿದೆ.

ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಈ ಅವಘಡ ಸಂಭವಿಸಿದೆ. ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಗುವನ್ನು ಹುಬ್ಬಳ್ಳಿಯ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.