ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಸ್ಕೂಟಿ ಕಲಿಸಲು ಬಂದ ಮಹಿಳೆ ಸ್ನೇಹಿತೆಯರೊಡಗೂಡಿ ಮನೆಗೆ ನುಗ್ಗಿ ನಗದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸಂಬಂಧ ಕುವೆಂಪುನಗರ ನಿವಾಸಿ ಸ್ಕೂಟಿ ಟ್ರೈನರ್ ಅಮೃತಾ (38) ಮತ್ತು ಅವರ ಗೆಳತಿ ಚಾಮುಂಡಿಪುರಂನ ಅಶ್ವಿನಿ ಹಾಗೂ ಮನೆಗೆಲಸದಾಕೆ ಶ್ರುತಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಸುಮಾರು 7.50 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣ, 12000 ರೂಪಾಯಿ ನಗದು, ಕೃತ್ಯಕ್ಕೆ ಬಳಸಲಾಗಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್’ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ: ಪೂರ್ಣಿಮಾ ಎಂಬವರು ರಾಮಕೃಷ್ಣ ನಗರ ಎ ಅಂಡ್ ಬಿ ಬ್ಲಾಕ್’ನಲ್ಲಿ ಒಬ್ಬರೇ ವಾಸವಿದ್ದರು. ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ತಮ್ಮ ಪುತ್ರಿಯ ವಿವಾಹಕ್ಕಾಗಿ ಚಿನ್ನಾಭರಣ ಮಾಡಿಸಿ ಮನೆಯಲ್ಲಿಟ್ಟಿದ್ದರು. ಈ ನಡುವೆ ಸ್ಕೂಟಿ ಓಡಿಸುವುದನ್ನು ಕಲಿಯಲು ಟ್ರೈನರ್ ಅಮೃತಾ ಅವರೊಂದಿಗೆ ಎಂದಿನಂತೆ ಡಿ.31 ರಂದು ಹೋಗಿದ್ದರು. ಬಳಿಕ ಮನೆಗೆ ಬಂದು ನೋಡಿದಾಗ ಬೀರುವಿನಲ್ಲಿದ್ದ ಚಿನ್ನ ಹಾಗೂ ನಗದು ಕಳ್ಳತನವಾಗಿತ್ತು. ಈ ಬಗ್ಗೆ ಪೂರ್ಣಿಮಾ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಸ್ಕೂಟಿ ಟ್ರೈನರ್ ಅಮೃತಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮನೆಯ ನಕಲಿ ಕೀ ಮಾಡಿಸಿಕೊಂಡು ಗೆಳತಿಯರಾದ ಬ್ಯುಟಿಶಿಯನ್ ಅಶ್ವಿನಿ ಹಾಗೂ ಮನೆ ಕೆಲಸ ಮಾಡಿಕೊಂಡಿದ್ದ ಶ್ರುತಿ ಜೊತೆಗೂಡಿ ಚಿನ್ನಾಭರಣ ಹಾಗೂ ಹಣ ದೋಚಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ಣಿಮಾ ಅವರು ಚಿನ್ನಾಭರಣಗಳನ್ನು ತಂದಿರುವುದನ್ನು ತಿಳಿದು, ನಕಲಿ ಕೀ ಮೂಲಕ ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ ಎಂದು ಕುವೆಂಪು ನಗರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.