ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಅಜಾಗರೂಕತೆಯಿಂದ ವಾಹನ ಚಲಾಯಿಸಿ, ಪ್ರಾಣಿಗಳ ಜೀವಕ್ಕೆ ಹಾನಿಯುಂಟು ಮಾಡಿದರೆ ಅದು ಐಪಿಸಿ ನಿಯಮಾವಳಿಗಳ ವ್ಯಾಪ್ತಿಗೆ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಆ ಮೂಲಕ ಆಹಾರ ಪೊಟ್ಟಣ ವಿತರಿಸುವ ವೇಳೆ ಆಕಸ್ಮಿಕವಾಗಿ ನಾಯಿಯ ಸಾವಿಗೆ ಕಾರಣನಾದ ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬರ ವಿರುದ್ಧ ಹೂಡಲಾಗಿದ್ದ ಎಫ್’ಐಆರ್ ಅನ್ನು ಅದು ರದ್ದುಗೊಳಿಸಿದೆ.
[ಮಾನಸ್ ಮಂದಾರ್ ಗೋಡ್ಬೋಲೆ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣ].
ಪ್ರಾಣಿ ಪ್ರಿಯರು ಸಾಕುಪ್ರಾಣಿಗಳನ್ನು ತಮ್ಮ ಮಗುವಿನಂತೆ ಪರಿಗಣಿಸುತ್ತಾರಾದರೂ ಅವು ಮನುಷ್ಯರಲ್ಲ ಎಂದು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ಪೀಠ ಹೇಳಿತು.
“ಮನುಷ್ಯನ ಪ್ರಾಣಕ್ಕೆ ಅಪಾಯವಾಗುವಂತೆ ಯಾವುದೇ ವಾಹನವನ್ನು ಓಡಿಸುವವರ ಬಗ್ಗೆ ಸೆಕ್ಷನ್ 279 ಹೇಳಿದರೆ, ಸೆಕ್ಷನ್ 337 ಮಾನವನ ಜೀವಕ್ಕೆ ಅಪಾಯವನ್ನುಂಟುಮಾಡುವ ಬಗ್ಗೆ ಮಾತನಾಡುತ್ತದೆ. ನಿಸ್ಸಂದೇಹವಾಗಿ, ನಾಯಿ/ಬೆಕ್ಕನ್ನು ಅದರ ಮಾಲೀಕರು ಮಗುವಿನಂತೆ ಅಥವಾ ಕುಟುಂಬದ ಸದಸ್ಯರಂತೆ ಪರಿಗಣಿಸುತ್ತಾರಾದರೂ ಮೂಲ ಜೀವಶಾಸ್ತ್ರದ ಪ್ರಕಾರ ಅವು ಮನುಷ್ಯರಲ್ಲ ಎಂದು ನಮಗೆ ತಿಳಿದುಬರುತ್ತದೆ, ಸೆಕ್ಷನ್ 279 ಮತ್ತು 337 ಮಾನವ ಜೀವಕ್ಕೆ ಅಪಾಯ ಉಂಟುಮಾಡುವ ಇಲ್ಲವೇ ಯಾವುದೇ ವ್ಯಕ್ತಿಗೆ ಗಾಯ ಅಥವಾ ಘಾಸಿ ಉಂಟುಮಾಡುವ ಕ್ರಿಯೆಗಳಿಗೆ ಸಂಬಂಧಿಸಿದೆ” ಎಂದು ಪೀಠ ಡಿಸೆಂಬರ್ 20ರಂದು ನೀಡಿದ ತೀರ್ಪಿನಲ್ಲಿ ತಿಳಿಸಿದೆ.
ಹೀಗಾಗಿ, ಅಪರಾಧ ನಿಗದಿಪಡಿಸಲು ಅಗತ್ಯ ಅಂಶ ಇಲ್ಲದೇ ಇರುವುದರಿಂದ ಈ ಪ್ರಕರಣಕ್ಕೆ ಐಪಿಸಿಯ ನಿಬಂಧನೆಗಳನ್ನು ಅನ್ವಯಿಸಲು ಆಗದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
“ಹೇಳಿರುವ ಸೆಕ್ಷನ್’ಗಳು ಮಾನವನಿಗೆ ಹೊರತಾಗಿ ಉಂಟಾಗುವ ಯಾವುದೇ ಘಾಸಿಯನ್ನು ಮಾನ್ಯ ಮಾಡುವುದಿಲ್ಲ ಮತ್ತು ಅದನ್ನು ಅಪರಾಧ ಎನ್ನುವುದಿಲ್ಲ. ಹೀಗಾಗಿ, ಸಾಕುಪ್ರಾಣಿಗಳಿಗೆ / ಪ್ರಾಣಿಗಳಿಗೆ ಉಂಟಾಗುವ ಗಾಯ/ಸಾವಿಗೆ ಸಂಬಂಧಿಸಿದಂತೆ, ಐಪಿಸಿ ಸೆಕ್ಷನ್ 279 ಮತ್ತು 337 ರ ಅಡಿಯಲ್ಲಿ ಅಪರಾಧ ನಿಗದಿಪಡಿಸಲಾಗದು” ಎಂದು ಪೀಠ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ ಎಫ್’ಐಆರ್’ನಲ್ಲಿ ಆರೋಪಿಸಿದಂತೆ ಅರ್ಜಿದಾರರು ಯಾವುದೇ ಅಪರಾಧ ಮಾಡಿಲ್ಲ ಮತ್ತು ಎಫ್’ಐಆರ್ ಕಾನೂನಿನಡಿ ಉಳಿಯದು ಎಂದು ನ್ಯಾಯಾಲಯ ಹೇಳಿತು. ಜೊತೆಗೆ ಎಫ್’ಐಆರ್ ದಾಖಲಿಸಿದ್ದಕ್ಕಾಗಿ ಪೊಲೀಸರ ವಿರುದ್ಧವೂ ಅದು ಕೆಂಗಣ್ಣು ಬೀರಿತು. ಯಾವುದೇ ಅಪರಾಧವನ್ನು ವಿಷದಪಡಿಸದೆ ಪ್ರಾಸಿಕ್ಯೂಷನ್ ಕ್ರಮಕ್ಕೆ ಮುಂದಾದ ಪೊಲೀಸರಿಂದ ಅರ್ಜಿದಾರರಿಗೆ ಉಂಟಾದ ಕ್ಷೋಭೆಯನ್ನು ಪರಿಗಣಿಸಿ ಸರ್ಕಾರವು ಅರ್ಜಿದಾರರಿಗೆ ₹20,000 ಪಾವತಿಸಲು ನ್ಯಾಯಾಲಯವು ಸೂಚಿಸಿತು. ಅಲ್ಲದೆ, ಆ ಹಣವನ್ನು ಎಫ್’ಐಆರ್ ದಾಖಲಿಸಿದ ಹಾಗೂ ಆರೋಪಪಟ್ಟಿ ದಾಖಲಿಸಲು ಅನುಮತಿಸಿದ ಅಧಿಕಾರಿಗಳಿಂದ ವಸೂಲು ಮಾಡಿಕೊಳ್ಳಲು ಸೂಚಿಸಿತು.
“…ಕಾನೂನಿನ ಪಾಲಕರಾದ ಪೊಲೀಸರು ಎಫ್’ಐಆರ್ ದಾಖಲಿಸುವಾಗ ನಂತರ ದೋಷಾರೋಪ ಪಟ್ಟಿ ಸಲ್ಲಿಸುವಾಗ ಹೆಚ್ಚು ಜಾಗರೂಕರಾಗಿರಬೇಕು” ಎಂದ ಪೀಠ ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿತು.
ಅರ್ಜಿದಾರ ಸ್ವಿಗ್ಗಿ ಡೆಲಿವರಿ ಬಾಯ್ ಮುಂಬೈನ ಮರೀನ್ ಡ್ರೈವ್ ಸಮೀಪ ಆಹಾರ ವಿತರಿಸಲು ಬೈಕ್ನಲ್ಲಿ ತೆರಳಿದ್ದ ವೇಳೆ, ಬೀದಿ ನಾಯಿಯೊಂದು ಅಡ್ಡಬಂದ ಪರಿಣಾಮ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಅರ್ಜಿದಾರ ಬಿದ್ದು ಗಾಯಗೊಂಡರೆ, ನಾಯಿಯು ಗಾಯಗೊಂಡು ಕೆಲ ಸಮಯದ ನಂತರ ಮೃತಪಟ್ಟಿತ್ತು. ಘಟನೆಯ ಬಗ್ಗೆ ಆ ಪ್ರದೇಶದಲ್ಲಿ ಬೀದಿ ನಾಯಿಗಳಿಗೆ ಅಹಾರ ನೀಡುವ ಹವ್ಯಾಸವುಳ್ಳ ದೂರುದಾರರು ದೂರು ದಾಖಲಿಸಿದ್ದರು. ಅರ್ಜಿದಾರರ ಅಜಾಗರೂಕ ಚಾಲನೆ ಘಟನೆಗೆ ಕಾರಣ ಎಂದು ದೂರು ದಾಖಲಿಸಲಾಗಿತ್ತು. ಆದರೆ, ಅರ್ಜಿದಾರರು ವೇಗಮಿತಿಯನ್ನು ಮೀರಿದ ಬಗ್ಗೆಯಾಗಲಿ, ಅಜಾಗರೂಕತೆಯಿಂದ ಚಾಲನೆ ಮಾಡಿದ ಬಗ್ಗೆಯಾಗಲಿ ನಿರೂಪಿಸಲು ಸಾಧ್ಯವಾಗಿರಲಿಲ್ಲ.