ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ಎನ್’ಎಲ್’ಎಸ್’ಐಯು) ಕಳೆದ ಎರಡು ವರ್ಷಗಳಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಾತಿ ನೀತಿಯನ್ನು ಜಾರಿಗೊಳಿಸಿಲ್ಲ ಎಂಬ ವಿಚಾರವನ್ನು ತನ್ನ ಗಮನಕ್ಕೆ ತರಲಾಗಿದೆ ಎಂದು ಈಚೆಗೆ ಬೆಂಗಳೂರಿನ ಎನ್’ಎಲ್’ಎಸ್’ಐಯು ಕುಲಪತಿಗೆ ಪತ್ರ ಬರೆದಿರುವ ಕಾನೂನು, ಸಂಸದೀಯ, ಶಾಸನ ಮತ್ತು ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಎನ್’ಎಲ್’ಎಸ್’ಐಯುನಲ್ಲಿ ಕಲಿಯಲು ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಿಸಲಾಗಿದೆ. ಆದರೆ, ಎನ್’ಎಲ್’ಎಸ್’ಐಯು ತಿದ್ದುಪಡಿ ಕಾಯಿದೆ 2020ರ ಸೆಕ್ಷನ್ 4ರಲ್ಲಿ ಸ್ಥಳೀಯ ಮೀಸಲಾತಿ ನೀತಿಯ ಕುರಿತು ಉಲ್ಲೇಖಿಸಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಎನ್’ಎಲ್’ಎಸ್’ಐಯುನಲ್ಲಿ ಕನ್ನಡಿಗರಿಗೆ ಶೇ. 25ರಷ್ಟು ಮೀಸಲಾತಿ ನೀಡುವುದಕ್ಕೆ ಬದಲಾಗಿ ಮೀಸಲಾತಿಯನ್ನು ವರ್ಗೀಕರಿಸಿ, ಅಖಿಲ ಭಾರತ ರ್ಯಾಂಕ್ ಅಡಿ ಆಯ್ಕೆಯಾದವನ್ನು ಒಳಗೊಂಡು ಶೇ. 25ರಷ್ಟು ಮೀಸಲಾತಿ ಕಲ್ಪಿಸಲಾಗಿದೆ; ಸಾಮಾನ್ಯ ವಿಭಾಗದಲ್ಲಿ ಬರಬೇಕಾದ ಅರ್ಹ ವಿದ್ಯಾರ್ಥಿಗಳನ್ನು ಎನ್ಎಲ್ಎಸ್ಐಯು ಸ್ಥಳೀಯ ಮೀಸಲು ವಿದ್ಯಾರ್ಥಿಗಳ ವಿಭಾಗಕ್ಕೆ ಸೇರಿಸಲಾಗಿದೆ. ಇದು ಮೀಸಲಾತಿ ಮತ್ತು ಕಾಯಿದೆಯ ಆಶಯಕ್ಕೆ ವಿರುದ್ಧ ನಿಲುವು ಎಂದು ಸಚಿವರು ಆಕ್ಷೇಪಿಸಿದ್ದಾರೆ.
ಅಖಿಲ ಭಾರತ ರ್ಯಾಂಕ್ ಆಧಾರದಲ್ಲಿ ಸಾಮಾನ್ಯ ಕೋಟಾದಡಿ ಆಯ್ಕೆಯಾಗದವರಿಗೆ ಮೀಸಲಾತಿ ನೀತಿ ಜಾರಿಗೊಳಿಸಲಾಗಿದೆ. ಹತ್ತು ವರ್ಷಗಳ ಕಾಲ ಕರ್ನಾಟಕದಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿರುವ ಸ್ಥಳೀಯ ಮೀಸಲಾತಿ ವಿಭಾಗದಲ್ಲಿ ಸಾಮಾನ್ಯ ಕೋಟಾದ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲಾಗದು ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಶಾಸನಭೆಯಲ್ಲಿ ಅವಿರೋಧವಾಗಿ ಕಾಯಿದೆಯನ್ನು ಜಾರಿಗೊಳಿಸಲಾಗಿದ್ದು, ಈ ಕಾಯಿದೆಯ ನಿಬಂಧನೆಯನ್ನು ಜಾರಿಗೊಳಿಸದಿರುವುದಕ್ಕೆ ಕಾನೂನು ಸಚಿವನಾಗಿ ತನಗೆ ತೀವ್ರ ಬೇಸರವಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.
2023-24ನೇ ಸಾಲಿನ ಶೈಕ್ಷಣಿಕ ನೋಂದಣಿ ಈಗಾಗಲೇ ಆರಂಭವಾಗಿದ್ದು, ಅಖಿಲ ಭಾರತ ರ್ಯಾಂಕ್ ಮೂಲಕ ಅರ್ಹತೆ ಪಡೆದಿರುವ ಕನ್ನಡಿಗರನ್ನು ಶೇ. 25ರಷ್ಟು ಸ್ಥಳೀಯ ಮೀಸಲಾತಿಯಿಂದ ಹೊರಗಿಟ್ಟು, ಉಳಿದ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.