ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಜಯಗಳಿಸಲು 122 ರನ್’ಗಳ ಗುರಿಯನ್ನು ಛತ್ತೀಸಗಢ ತಂಡವು ನೀಡಿದೆ.
ಪಂದ್ಯದ ಕೊನೆಯ ದಿನವಾದ ಶುಕ್ರವಾರ ಛತ್ತೀಸಗಢ ತಂಡವು ಎರಡನೇ ಇನಿಂಗ್ಸ್’ನಲ್ಲಿ 77.5 ಓವರ್ಗಳಲ್ಲಿ 177 ರನ್ ಗಳಿಸಿತು. ಕರ್ನಾಟಕ ತಂಡವು ಮೊದಲ ಇನಿಂಗ್ಸ್’ನಲ್ಲಿ 55 ರನ್ಗಳ ಅಲ್ಪಮುನ್ನಡೆ ಸಾಧಿಸಿತ್ತು. ಮೂರನೇ ದಿನದಾಟದ ಕೊನೆಗೆ ಛತ್ತೀಸಗಢ ತಂಡವು ಎರಡು ವಿಕೆಟ್ಗಳಿಗೆ 35 ರನ್ ಗಳಿಸಿತ್ತು.
ಆದರೆ ಶುಕ್ರವಾರ ಕರ್ನಾಟಕದ ಮಧ್ಯಮವೇಗಿ ವೈಶಾಖ ವಿಜಯಕುಮಾರ್ (59ಕ್ಕೆ5) ಉತ್ತಮ ಬೌಲಿಂಗ್ ಮಾಡಿ ಛತ್ತೀಸಗಢ ತಂಡದ ಬ್ಯಾಟರ್’ಗಳಿಗೆ ಕಡಿವಾಣ ಹಾಕಿದರು.
ಪ್ರವಾಸಿ ತಂಡದ ಅಮನದೀಪ್ ಖರೆ (50; 111ಎ) ಮತ್ತು ಮಯಂಕ್ ವರ್ಮಾ (46; 128ಎ) ಅವರು ಇನಿಂಗ್ಸ್ ಬೆಳೆಸಲು ಪ್ರಯತ್ನಿಸಿದರು. ಆದರೆ, ಚಹಾ ವಿರಾಮಕ್ಕೆ ಇನ್ನೂ ಕೆಲವು ನಿಮಿಷಗಳು ಬಾಕಿಯಿರುವಾಗಲೇ ಛತ್ತೀಸಗಢ ಆಲೌಟ್ ಆಯಿತು.
ಕರ್ನಾಟಕದ ಆಫ್’ಸ್ಪಿನ್ನರ್ ಕೆ. ಗೌತಮ್ ಎರಡು, ಶ್ರೇಯಸ್ ಗೋಪಾಲ್, ವಿದ್ವತ್ ಕಾವೇರಪ್ಪ ಹಾಗೂ ವಿ. ಕೌಶಿಕ್ ತಲಾ ಒಂದು ವಿಕೆಟ್ ಗಳಿಸಿದರು.