ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು. 13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ ₹3 ಕೋಟಿ. ತಮಿಳಿಗೆ ಸಿಕ್ಕಿದ್ದು ₹43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ ₹643 ಕೋಟಿ. ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ?’ ಎಂದು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
‘ಡಬಲ್ ಎಂಜಿನ್ ಸರ್ಕಾರದ ಅನುಕೂಲಗಳ ಬಗ್ಗೆ ಪದೇಪದೆ ಹೇಳುವ ಸರ್ಕಾರ ಕನ್ನಡಕ್ಕೆ ಮಾಡಿದ್ದೇನು. ಸಂಸ್ಕೃತ ಮತ್ತು ತಮಿಳು ಭಾಷೆಗೆ ಕಳೆದ ಮೂರು ವರ್ಷಗಳಲ್ಲಿ ಸುಮಾರು ₹40–50 ಕೋಟಿ ಅನುದಾನ ನೀಡಲಾಗಿದೆ. ಕನ್ನಡಕ್ಕೆ ನಾಲ್ಕಾರು ಕೋಟಿಯೂ ದಾಟಿಲ್ಲ, ಶಾಸ್ತ್ರೀಯ ಭಾಷೆಯ ಅಧ್ಯಯನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದೇವೆ, ಇದು ನಮ್ಮ ಜಡತ್ವದ ಕುರುಹು ಅಲ್ಲವೇನು? ಎಂದು ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ಭಾಷಣದಲ್ಲಿ ಸಾಹಿತಿ ದೊಡ್ಡರಂಗೇಗೌಡರು ಪ್ರಶ್ನೆ ಮಾಡಿದ್ದರು.
ಈ ವಿಚಾರಕ್ಕೆ ಧ್ವನಿಗೂಡಿಸಿರುವ ಶಾಸಕ ಎಚ್.ಡಿ ಕುಮಾರಸ್ವಾಮಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ.
ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದು ಹೇಳಿದ್ದಾರೆ.
ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬೊಮ್ಮಾಯಿ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದಿದ್ದಾರೆ.
ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಬಿಜೆಪಿ, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ಬಿಜೆಪಿ ವರ್ತಿಸುತ್ತಿರುವ ರೀತಿ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಮಾಜಿ ಸಿಎಂ ಎಚ್ಡಿಕೆ ಅಭಿಪ್ರಾಯಪಟ್ಟಿದ್ದಾರೆ.