ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಯಾತ್ರಾರ್ಥಿ ಭಕ್ತರು ಸಮಂಜಸವಾದ ರೀತಿಯಲ್ಲಿ ಪೂಜೆ ಸಲ್ಲಿಸುವುದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಬರಿಮಲೆ ದೇವಸ್ಥಾನ ಆಡಳಿತ ನೋಡಿಕೊಳ್ಳುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಇತ್ತೀಚೆಗೆ ನಿರ್ದೇಶನ ನೀಡಿದೆ.
ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಾರ್ಥಿಗಳು ಚಲನಚಿತ್ರ ತಾರೆಯರ ಪೋಸ್ಟರ್’ಗಳನ್ನು ಕೊಂಡೊಯ್ಯುವ ಮತ್ತು ವಾದ್ಯಗಳೊಂದಿಗೆ ಪ್ರದರ್ಶನ ನೀಡುವ ಘಟನೆಗಳನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿ ಜಿ ಅಜಿತ್ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಪತ್ತಿನೆಟ್ಟಂಪಾಡಿ ಮೂಲಕ ಶಬರಿಮಲೆ ಸನ್ನಿಧಾನಕ್ಕೆ ಯಾವುದೇ ಯಾತ್ರಾರ್ಥಿಗಳಿಗೆ ಪ್ರವೇಶ ನೀಡದಂತೆ ಅಥವಾ ಭಿತ್ತಿಪತ್ರಗಳನ್ನು ಹಿಡಿದು ಶಬರಿಮಲೆ ಸನ್ನಿಧಾನದಲ್ಲಿ ದರ್ಶನ ಪಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದ್ದು ಈ ಅರ್ಜಿ ವಿಲೇವಾರಿ ಮಾಡುವುದು ಸೂಕ್ತ ಎಂದು ಭಾವಿಸುತ್ತೇವೆ. ಖ್ಯಾತನಾಮರು, ರಾಜಕಾರಣಿಗಳು ಮುಂತಾದವರ ಭಿತ್ತಿಚಿತ್ರಗಳನ್ನು ಪ್ರದರ್ಶಿಸಲು ಅಥವಾ ಡೋಲು ಮತ್ತಿತರ ವಾದ್ಯಗಳನ್ನು ಶಬರಿಮಲೆ ಸನ್ನಿಧಾನದಲ್ಲಿ ನುಡಿಸಲು ಅವಕಾಶ ಇಲ್ಲ ಎಂದಿರುವ ಪೀಠ ಭಗವಾನ್ ಅಯ್ಯಪ್ಪನಿಗೆ ಪೂಜೆ ಸಲ್ಲಿಸುವ ಪ್ರತಿಯೊಬ್ಬ ಭಕ್ತರೂ ಶಬರಿಮಲೆಯಲ್ಲಿನ ಆಚರಣೆ ಮತ್ತು ಸಂಪ್ರದಾಯಕ್ಕೆ ಒಳಪಡುವುದು ಕರ್ತವ್ಯ ಎಂದು ನ್ಯಾಯಾಲಯ ಹೇಳಿದೆ.
ಖ್ಯಾತನಾಮರು, ರಾಜಕಾರಣಿಗಳು ಮತ್ತಿತರರ ಪೋಸ್ಟರ್ ಹಾಗೂ ಕಟೌಟ್’ಗಳನ್ನು ಆರಾಧಕರು ತರುತ್ತಿರುವ ಬಗ್ಗೆ ಶಬರಿಮಲೆ ಭಕ್ತರೊಬ್ಬರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದರು. ಇದನ್ನು ಆಧರಿಸಿ ಸ್ವಯಂಪ್ರೇರಿತವಾಗಿ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿತ್ತು.
ಪತ್ರಿಕಾ ವರದಿ ಪ್ರಕಾರ ಖ್ಯಾತ ಡ್ರಮ್ ವಾದಕ ಶಿವಮಣಿ ಅವರು ದೇವಸ್ಥಾನದ ಅಂಗಳದಲ್ಲಿ ಡ್ರಮ್ ನುಡಿಸಿದಂತಹ ಘಟನೆ ಬಗ್ಗೆಯೂ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಕೆಲ ದಿನಗಳ ಹಿಂದೆ ಪುನೀತ್ ರಾಜಕುಮಾರ್ ಅವರ ಪೋಸ್ಟರ್ಗಳನ್ನು ಹಿಡಿದು ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
“ಆಕ್ಸ್ಫರ್ಡ್ ನಿಘಂಟಿನ ಪ್ರಕಾರ, ‘ಆರಾಧಕ’ ಎಂದರೆ ದೇವತೆಗೆ ಗೌರವ ಮತ್ತು ಪೂಜೆ ಸಲ್ಲಿಸುವ ವ್ಯಕ್ತಿ. ಆರಾಧಿಸುವ ಹಕ್ಕು ನಾಗರಿಕ ಹಕ್ಕು, ಸಹಜವಾಗಿ ಇದು ಪ್ರತಿ ದೇವಾಲಯದಲ್ಲಿನ ಆಚರಣೆ ಮತ್ತು ಸಂಪ್ರದಾಯಕ್ಕೆ ಒಳಪಟ್ಟಿರುತ್ತದೆ” ಎಂದು ಅದು ಹೇಳಿತು. ಇದು ಮಕರವಿಳಕ್ಕು ಉತ್ಸವದಂತಹ ಆಚರಣೆಗಳಿಗೂ ಅನ್ವಯಿಸುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.
ಘಟನೆ ಕುರಿತಂತೆ ದೇವಸ್ಥಾನದ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿತು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಂಡಳಿಗೆ ಸೂಚಿಸಿದ ನ್ಯಾಯಾಲಯ ಪ್ರಕರಣವನ್ನು ವಿಲೇವಾರಿ ಮಾಡಿತು.