ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಇನ್’ಸ್ಟಾ ಗ್ರಾಂ ಖಾತೆಯಲ್ಲಿ ಪರಿಚಯವಾದ ಮಹಿಳೆಗೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ 4.77 ಲಕ್ಷ ವಂಚಿಸಿದ್ದ ಪ್ರಕರಣದಲ್ಲಿ ಅಸ್ಸಾಂನ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ ಕರಿಮ್’ಗಂಜ್ ಜಿಲ್ಲೆಯ ನಿವಾಸಿಗಳಾದ ಸಿಂಬುಲಾಲ್ ಚೊರಾಯತ್ (26), ಲಾಲ್ ಸಂಗೀಕಾರ್ ಚೊರಾಯತ್ (23) ಮತ್ತು ಹರಿಲಾಲ್ ಚೊರಾಯತ್ (22) ಬಂಧಿತರು.
ಅವರಿಂದ 2 ಕೀ ಪ್ಯಾಡ್ ಮೊಬೈಲ್ ಫೋನ್, 4 ಸ್ಮಾರ್ಟ್ ಫೋನ್, 2 ಬ್ಯಾಂಕ್ ಪಾಸ್ಪುಸ್ತಕ, 1 ಮನೆ ಬಾಡಿಗೆ ಕರಾರರು ಪತ್ರ ಹಾಗೂ 26 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಈ ಕುರಿತು ಮಾಹಿತಿ ನೀಡಿದ್ದು, ವಂಚಿತ ಮಹಿಳೆ, ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದ ಹಿಮಶ್ವೇತಾ ನೀಡಿದ ದೂರಿನ ಮೇರೆಗೆ, 2022ರ ಸೆ.4ರಂದು ಮೈಸೂರಿನ ಸೆನ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ವಾಟ್ಸ್’ಆ್ಯಪ್ ಮೂಲಕ ಸಂಭಾಷಣೆ ನಡೆಸಿ, ಐ–ಫೋನ್, ಇತರೆ ದುಬಾರಿ ವಸ್ತುಗಳನ್ನು ಕಳುಹಿಸಿರುವುದಾಗಿ ನಂಬಿಸಿದ್ದರು. ಉಡುಗೊರೆಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದು, ಆತನನ್ನು ಬಿಡಿಸಿಕೊಳ್ಳಲು ವಿವಿಧ ಬ್ಯಾಂಕ್ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದರು. ಹಣ ಹಾಕಿ ಒಂದು ತಿಂಗಳಾದರೂ ಮಹಿಳೆಗೆ ಉಡುಗೊರೆ ದೊರಕಿರಲಿಲ್ಲ.
ಆರೋಪಿಗಳಿಗೆ ಪರಿಚಯವಿದ್ದ, ಕರೀಂಗಂಜ್ ಜಿಲ್ಲೆಯ ಬಾಲಿಪಿಪಿಲ ನೂರ್ಕಪುಂಜಿ ಗ್ರಾಮದ ಲಾಲ್ ಜಮ್ಮುಲ್’ಗೆ ಪರಿಚಯವಿದ್ದ ನೈಜೀರಿಯಾ ಮೂಲದ ವ್ಯಕ್ತಿಯ ಮೂಲಕವೇ ವಂಚನೆ ನಡೆದಿದೆ.
ಜಮ್ಮುಲ್ ತನ್ನ ಗ್ರಾಮಸ್ಥರನ್ನು ಬೆಂಗಳೂರಿಗೆ ಕರೆಸಿ, ಅವರ ಆಧಾರ್ಕಾರ್ಡ್ ವಿಳಾಸವನ್ನು ಬೆಂಗಳೂರಿಗೆ ಬದಲಾಯಿಸಿ, ವಿವಿಧ ಬ್ಯಾಂಕ್’ಗಳಲ್ಲಿ 39 ನಕಲಿ ಖಾತೆಗಳನ್ನು ತೆರೆದಿದ್ದ. ನಂತರ ಆರೋಪಿಗಳು ಜನರಿಗೆ ಫೋನ್ ಮೂಲಕ ಕರೆಮಾಡಿ ಹಣ ಪಡೆದು ವಂಚಿಸುತ್ತಿದ್ದರು. ನೈಜೀರಿಯಾದ ವ್ಯಕ್ತಿಯೇ ಹಣ ಪಡೆದು ಉಳಿದವರಿಗೆ ಹಂಚುತ್ತಿದ್ದ ಎಂದು ತಿಳಿಸಿದರು.
ಆರೋಪಿಗಳು ಹೆಚ್ಚಾಗಿ ವಾರಾಂತ್ಯದಲ್ಲೇ ಆನ್’ಲೈನ್ ವಂಚನೆ ನಡೆಸುತ್ತಿದ್ದರು. ರಜಾ ದಿನಗಳಲ್ಲಿ ಬ್ಯಾಂಕ್’ಗಳು ಕಾರ್ಯನಿರ್ವಹಿಸದ ಕಾರಣ ತಕ್ಷಣ ಹಣ ವಹಿವಾಟು ತಡೆಯಲು ಸಾಧ್ಯವಿಲ್ಲ ಎಂಬುದನ್ನು ಅರಿತಿದ್ದರು ಎಂದರು.
ಸೆನ್ ಠಾಣೆಯ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್, ಪಿಎಸ್’ಐ ಲೋಕೇಶ್, ಸಿಬ್ಬಂದಿ ಮಂಜುನಾಥ ರಂಗಸ್ವಾಮಿ, ಮಂಜುನಾಥ ಬಿ.ವಿ.ಮಹದೇವಸ್ವಾಮಿ, ವೆಂಕಟೇಶ, ಪುಷ್ಪಲತಾ, ಮಹೇಶ, ಮಹೇಶ ಕುಮಾರ, ಅಭಿಷೇಕ್, ಆದರ್ಶ್, ಸಿಂಧು ಭಾಗವಹಿಸಿದ್ದರು.