ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಬಿಜೆಪಿಯವರಿಗೆ ದಲಿತರ ಮೇಲೆ ನಿಜಕ್ಕೂ ಪ್ರೀತಿ ಇದ್ದರೆ, ಮೀಸಲಾತಿ ಕೊಡುವ ಮನಸ್ಸಿದ್ದರೆ ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿ, ಈ ಬಗ್ಗೆ ಮೀಸಲಾತಿ ಅನ್ವಯ ನೋಟಿಫಿಕೇಶನ್ ಹೊರಡಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವವನಾರಾಯಣ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಮಾತನಾಡುವುದಿಲ್ಲ, ಆದರೆ, ಚುನಾವಣೆ ಬಂದಾಗ ಮಾತ್ರ ದಲಿತರ ಮೇಲೆ ಪ್ರೀತಿಯನ್ನ ಬಿಜೆಪಿಯವರು ತೋರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರಿಗೆ ಚುನಾವಣಾ ಸಂದರ್ಭದಲ್ಲಿ ಡಾ. ಬಿ ಆರ್. ಅಂಬೇಡ್ಕರ್ ಹಾಗೂ ದಲಿತರ ಸ್ಮರಣೆ ಮಾಡುತ್ತಾರೆ. ಇವರು ಎಸ್ಸಿ, ಎಸ್ಟಿ ಮಿಸಲಾತಿಯನ್ನು ಶೇ 5 ರಷ್ಟು ಹೆಚ್ಚಿನ ಶೆಡ್ಯೂಲ್’ಗೆ ಅಂದರೆ 9ಕ್ಕೆ ಸೇರ್ಪಡೆ ಅದರಷ್ಟೇ ಮಾನ್ಯವಾಗುತ್ತದೆ. ಆದರೆ, ಕೇಂದ್ರ ಸಚಿವ ನಾರಾಯಣಸ್ವಾಮಿ ಮೀಸಲಾತಿ ಹೆಚ್ಚಳ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಮೀಸಲಾತಿ ರಾಜಕೀಯ ಗಿಮಿಕ್ಸ್ ಎಂದು ತೋರುತ್ತದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರಿಗೆ ಜನ ಬೆಂಬಲ ಇದೆ
ಸಿದ್ದರಾಮಯ್ಯ ಜನಪ್ರಿಯ ನಾಯಕರು ಅವರಿಗೆ ಎಲ್ಲ ಕಡೆ ಬೆಂಬಲ ಇದೆ. ವರುಣಾದಿಂದ ಸ್ಪರ್ಧೆ ಮಾಡುವಂತೆ ನಾವು ಕೇಳಿದ್ದೆವು. ಆದರೆ, ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಅವರು ಈ ರಾಜ್ಯದ ನಾಯಕರು, ಎಲ್ಲೇ ಸ್ಪರ್ಧೆ ಮಾಡಿದರೂ ಅವರಿಗೆ ಜನ ಬೆಂಬಲ ಇರುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಬೆಂಗಳೂರು ಮೈಸೂರು ನಡುವಿನ ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನ ಪ್ರಸ್ತಾವನೆ ಮಾಡಲಾಗಿದೆ. ಅದನ್ನ ಯಾರು ತಡೆ ಹಿಡಿಯಬಾರದೆಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಡಾ.ಬಿ ಆರ್. ಅಂಬೇಡ್ಕರ್ ಏಕರೂಪ ನಾಗರಿಕ ಸಂಹಿತೆ ಪರವಾಗಿ ಇದ್ದರು. ಅಂಬೇಡ್ಕರ್ ಯಾವಾಗಲೂ ಜಾತ್ಯತೀತರಾಗಿದ್ದರು. ನಮ್ಮ ದೇಶವನ್ನು ಜಾತ್ಯತೀತ ದೇಶ ಮಾಡಲು ಹೊರಟಿದ್ದರು. ಅಂಬೇಡ್ಕರ್ ಮೇಲೆ ನಿಜಕ್ಕೂ ಪ್ರೀತಿ ಇದ್ದರೆ ನಮ್ಮದು ಜಾತ್ಯತೀತ ದೇಶ ಎಂದು ಸಿ ಟಿ. ರವಿ ಹೇಳಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಬಗ್ಗೆ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಆಗಲಿ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ, ದೇಶದಲ್ಲಿ ಅತಿ ಹೆಚ್ಚು ದಲಿತರ ಏಳಿಗೆಗೆ ಕಾರ್ಯಕ್ರಮ ನೀಡಿದ ಪಕ್ಷ ಕಾಂಗ್ರೆಸ್, ಹೀಗಾಗಿ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.